<p class="title"><strong>ಧುಬ್ರಿ, ಅಸ್ಸಾಂ: </strong>ಅಸ್ಸಾಂನ ಧುಬ್ರಿ ಜಿಲ್ಲೆಯ ಬಳಿ ಬ್ರಹ್ಮಪುತ್ರ ನದಿಯಲ್ಲಿ ನಾಲ್ಕು ದಿನದ ಹಿಂದೆ ದೋಣಿ ಮುಳುಗಿ ನಾಪತ್ತೆಯಾಗಿದ್ದ ಅಧಿಕಾರಿಯ ಶವ ಭಾನುವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಬಿಎಸ್ಎಫ್, ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸಿಬ್ಬಂದಿ, ದೋಣಿ ಮುಳುಗಿದ್ದ ಐರೊಂಜೊಂಗ್ಲಾ ಪ್ರದೇಶದಿಂದ 700 ಮೀಟರ್ ದೂರದಲ್ಲಿ, ಬಾಂಗ್ಲಾದೇಶ ಗಡಿಯ ಬಳಿ, ಸರ್ಕಲ್ ಇನ್ಸ್ಪೆಕ್ಟರ್ ಸಂಜು ದಾಸ್ ಅವರ ಮೃತದೇಹವನ್ನು ಪತ್ತೆ ಮಾಡಿದೆ ಎಂದೂ ಅವರು ಹೇಳಿದರು.</p>.<p class="title">ಸಂಜು ದಾಸ್ ಸಿಲ್ಚಾರ್ ಮೂಲದವರು.</p>.<p class="title">29 ಪ್ರಯಾಣಿಕರು ಪ್ರಯಾಣಿಸುತ್ತಿದ್ದ ದೋಣಿಯು, ಧುಬ್ರಿಯಿಂದ 3 ಕಿ.ಮೀ. ದೂರದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದಕ್ಕೆ ಡಿಕ್ಕಿ ಹೊಡೆದುಬ್ರಹ್ಮಪುತ್ರ ನದಿಯಲ್ಲಿ ಮುಳುಗಿತ್ತು. ನದಿಯಲ್ಲಿ ಮುಳುಗಿದ್ದ ಜನರನ್ನು ಎಸ್ಡಿಆರ್ಎಫ್ ಪಡೆಯ ಕಾರ್ಯಾಚರಣೆಯ ಮೂಲಕ 28 ಮಂದಿಯನ್ನು ರಕ್ಷಿಸಲಾಗಿತ್ತು.</p>.<p class="title">ಇದೇ ವೇಳೆ, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ, ಖಾಸಗಿ ಬಹುರಾಷ್ಟ್ರೀಯ ಕಟ್ಟಡ ನಿರ್ಮಾಣ ಸಂಸ್ಥೆಯ ಇಬ್ಬರು ಉದ್ಯೋಗಿಗಳನ್ನು ಬಂಧಿಸಲಾಗಿದೆ.</p>.<p class="title">ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಆಧಾರದ ಮೇಲೆ ದೂರು ನೀಡಿದ ಬಳಿಕ ಈ ಇಬ್ಬರು ಉದ್ಯೋಗಿಗಳನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಧುಬ್ರಿ, ಅಸ್ಸಾಂ: </strong>ಅಸ್ಸಾಂನ ಧುಬ್ರಿ ಜಿಲ್ಲೆಯ ಬಳಿ ಬ್ರಹ್ಮಪುತ್ರ ನದಿಯಲ್ಲಿ ನಾಲ್ಕು ದಿನದ ಹಿಂದೆ ದೋಣಿ ಮುಳುಗಿ ನಾಪತ್ತೆಯಾಗಿದ್ದ ಅಧಿಕಾರಿಯ ಶವ ಭಾನುವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಬಿಎಸ್ಎಫ್, ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸಿಬ್ಬಂದಿ, ದೋಣಿ ಮುಳುಗಿದ್ದ ಐರೊಂಜೊಂಗ್ಲಾ ಪ್ರದೇಶದಿಂದ 700 ಮೀಟರ್ ದೂರದಲ್ಲಿ, ಬಾಂಗ್ಲಾದೇಶ ಗಡಿಯ ಬಳಿ, ಸರ್ಕಲ್ ಇನ್ಸ್ಪೆಕ್ಟರ್ ಸಂಜು ದಾಸ್ ಅವರ ಮೃತದೇಹವನ್ನು ಪತ್ತೆ ಮಾಡಿದೆ ಎಂದೂ ಅವರು ಹೇಳಿದರು.</p>.<p class="title">ಸಂಜು ದಾಸ್ ಸಿಲ್ಚಾರ್ ಮೂಲದವರು.</p>.<p class="title">29 ಪ್ರಯಾಣಿಕರು ಪ್ರಯಾಣಿಸುತ್ತಿದ್ದ ದೋಣಿಯು, ಧುಬ್ರಿಯಿಂದ 3 ಕಿ.ಮೀ. ದೂರದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದಕ್ಕೆ ಡಿಕ್ಕಿ ಹೊಡೆದುಬ್ರಹ್ಮಪುತ್ರ ನದಿಯಲ್ಲಿ ಮುಳುಗಿತ್ತು. ನದಿಯಲ್ಲಿ ಮುಳುಗಿದ್ದ ಜನರನ್ನು ಎಸ್ಡಿಆರ್ಎಫ್ ಪಡೆಯ ಕಾರ್ಯಾಚರಣೆಯ ಮೂಲಕ 28 ಮಂದಿಯನ್ನು ರಕ್ಷಿಸಲಾಗಿತ್ತು.</p>.<p class="title">ಇದೇ ವೇಳೆ, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ, ಖಾಸಗಿ ಬಹುರಾಷ್ಟ್ರೀಯ ಕಟ್ಟಡ ನಿರ್ಮಾಣ ಸಂಸ್ಥೆಯ ಇಬ್ಬರು ಉದ್ಯೋಗಿಗಳನ್ನು ಬಂಧಿಸಲಾಗಿದೆ.</p>.<p class="title">ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಆಧಾರದ ಮೇಲೆ ದೂರು ನೀಡಿದ ಬಳಿಕ ಈ ಇಬ್ಬರು ಉದ್ಯೋಗಿಗಳನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>