ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲ್ಮಾನ್ ಹತ್ಯೆಗೂ ಸಂಚು ರೂಪಿಸಿದ್ದ ಸಿಧು ಮೂಸೆವಾಲಾ ಕೊಲೆ ಪ್ರಕರಣದ ಆರೋಪಿ

ಅಕ್ಷರ ಗಾತ್ರ

ಬೆಂಗಳೂರು: ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಹೊಣೆ ಹೊತ್ತುಕೊಂಡಿರುವ ಲಾರೆನ್ಸ್ ಬಿಷ್ಣೋಯಿ, ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೂ ಸಂಚು ರೂಪಿಸಿದ್ದ ಎನ್ನುವ ಸಂಗತಿ ಬಯಲಾಗಿದೆ.

ಸಿಧು ಹತ್ಯೆಯನ್ನು ತಾವೇ ಮಾಡಿದ್ದಾಗಿ ಬಿಷ್ಣೋಯಿ ಗ್ಯಾಂಗ್ ಫೇಸ್‌ಬುಕ್ ಪೋಸ್ಟ್ ಮೂಲಕ ಹೇಳಿಕೊಂಡಿದೆ.

2018ರಲ್ಲಿ ಬಿಷ್ಣೋಯಿ ಗ್ಯಾಂಗ್‌ನ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾಗ, ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಮೇಲೆ ದ್ವೇಷವಿದ್ದು, ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವುದಾಗಿ ಹೇಳಿದ್ದ.

ಬಿಷ್ಣೋಯಿಗಳಿಗೆ ಕೃಷ್ಣ ಮೃಗ ಅತ್ಯಂತ ಪ್ರಿಯ ಮತ್ತು ಪವಿತ್ರವಾಗಿದ್ದು, ಅದನ್ನು ಹತ್ಯೆ ಮಾಡಿರುವ ಸಲ್ಮಾನ್ ಖಾನ್ ಮೇಲೆ ಸೇಡು ತೀರಿಸಿಕೊಳ್ಳಲು ಅವರು ಮುಂದಾಗಿದ್ದರು ಎನ್ನುವ ಸಂಗತಿ ಬಹಿರಂಗವಾಗುತ್ತಲೇ, ಸಲ್ಮಾನ್‌ಗೆ ಭದ್ರತೆ ಹೆಚ್ಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT