<p><strong>ಮುಂಬೈ:</strong> ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಾಯಿ ಸುನಂದಾ ಶೆಟ್ಟಿ ವಿರುದ್ಧದ ವಾರಂಟ್ ಅನ್ನು ರದ್ದುಗೊಳಿಸಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಂಗಳವಾರ (ಏ.12) ಜಾಮೀನು ಮಂಜೂರು ಮಾಡಿದೆ.</p>.<p>ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಸುನಂದಾ ಅವರ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು.</p>.<p>ಸುನಂದಾ ಅವರು ಮಂಗಳವಾರ ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ ವಾರೆಂಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಲಯವು ಸುನಂದಾ ಅವರ ಮನವಿಯನ್ನು ಅಂಗೀಕರಿಸಿದ್ದು, ₹15,000 ವೈಯಕ್ತಿಕ ಬಾಂಡ್ ಪಡೆದು ಜಾಮೀನು ನೀಡಿದೆ.</p>.<p>ಸೆಷನ್ಸ್ ನ್ಯಾಯಾಲಯವು ಶಿಲ್ಪಾ ಮತ್ತು ಸಹೋದರಿ ಶಮಿತಾ ಅವರಿಗೆ ರಿಲೀಫ್ ನೀಡಿದ್ದು, ಇದೇ ದೂರಿನ ಮೇಲೆ ಅವರ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಆದರೆ ಸುನಂದಾ ವಿರುದ್ಧದ ವಿಚಾರಣೆಯನ್ನು ಮುಂದುವರಿಸಬಹುದು ಎಂದು ಹೇಳಿತ್ತು.</p>.<p>ಮುಂಬೈನ ಉದ್ಯಮಿ ಫರ್ಹಾದ್ ಅಮ್ರಾ ಅವರ ಬಳಿ ಪಡೆದಿದ್ದ ₹21 ಲಕ್ಷ ಸಾಲದ ಹಣವನ್ನು ಮರುಪಾವತಿ ಮಾಡದ ಆರೋಪದ ಮೇಲೆ ಸುನಂದಾ ಶೆಟ್ಟಿ ಕುಟುಂಬದ ವಿರುದ್ಧ ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.</p>.<p>2015ರಲ್ಲಿ ಶಿಲ್ಪಾ ಅವರ ತಂದೆ ಸುರೇಂದ್ರ ಶೆಟ್ಟಿ, ಫರ್ಹಾದ್ ಅವರಿಂದ ಹಣ ಸಾಲ ಪಡೆದಿದ್ದರು. 2017ರ ಜನವರಿಯೊಳಗೆ ಈ ಹಣವನ್ನು ಮರುಪಾವತಿ ಮಾಡಬೇಕಾಗಿತ್ತು. ಆದರೆ, 2016ರಲ್ಲಿ ಸುರೇಂದ್ರ ನಿಧನರಾದರು. ಸಾಲ ಮರು ಪಾವತಿ ಮಾಡುವುದಕ್ಕೂ ಮುನ್ನವೇ ಸುರೇಂದ್ರ ನಿಧನರಾದ್ದರಿಂದ, ಸಾಲದ ಹೊಣೆ ಸುನಂದಾ, ಶಿಲ್ಪಾ, ಶಮಿತಾ ಅವರ ಮೇಲಿತ್ತು. ಆದರೆ, ತಾವು ಹಣ ಪಡೆದಿಲ್ಲವೆಂದು ಸಾಲ ಮರುಪಾವತಿಸಲು ನಿರಾಕರಿಸಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಾಯಿ ಸುನಂದಾ ಶೆಟ್ಟಿ ವಿರುದ್ಧದ ವಾರಂಟ್ ಅನ್ನು ರದ್ದುಗೊಳಿಸಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಂಗಳವಾರ (ಏ.12) ಜಾಮೀನು ಮಂಜೂರು ಮಾಡಿದೆ.</p>.<p>ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಸುನಂದಾ ಅವರ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿತ್ತು.</p>.<p>ಸುನಂದಾ ಅವರು ಮಂಗಳವಾರ ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿ ವಾರೆಂಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಲಯವು ಸುನಂದಾ ಅವರ ಮನವಿಯನ್ನು ಅಂಗೀಕರಿಸಿದ್ದು, ₹15,000 ವೈಯಕ್ತಿಕ ಬಾಂಡ್ ಪಡೆದು ಜಾಮೀನು ನೀಡಿದೆ.</p>.<p>ಸೆಷನ್ಸ್ ನ್ಯಾಯಾಲಯವು ಶಿಲ್ಪಾ ಮತ್ತು ಸಹೋದರಿ ಶಮಿತಾ ಅವರಿಗೆ ರಿಲೀಫ್ ನೀಡಿದ್ದು, ಇದೇ ದೂರಿನ ಮೇಲೆ ಅವರ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು. ಆದರೆ ಸುನಂದಾ ವಿರುದ್ಧದ ವಿಚಾರಣೆಯನ್ನು ಮುಂದುವರಿಸಬಹುದು ಎಂದು ಹೇಳಿತ್ತು.</p>.<p>ಮುಂಬೈನ ಉದ್ಯಮಿ ಫರ್ಹಾದ್ ಅಮ್ರಾ ಅವರ ಬಳಿ ಪಡೆದಿದ್ದ ₹21 ಲಕ್ಷ ಸಾಲದ ಹಣವನ್ನು ಮರುಪಾವತಿ ಮಾಡದ ಆರೋಪದ ಮೇಲೆ ಸುನಂದಾ ಶೆಟ್ಟಿ ಕುಟುಂಬದ ವಿರುದ್ಧ ಜುಹು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.</p>.<p>2015ರಲ್ಲಿ ಶಿಲ್ಪಾ ಅವರ ತಂದೆ ಸುರೇಂದ್ರ ಶೆಟ್ಟಿ, ಫರ್ಹಾದ್ ಅವರಿಂದ ಹಣ ಸಾಲ ಪಡೆದಿದ್ದರು. 2017ರ ಜನವರಿಯೊಳಗೆ ಈ ಹಣವನ್ನು ಮರುಪಾವತಿ ಮಾಡಬೇಕಾಗಿತ್ತು. ಆದರೆ, 2016ರಲ್ಲಿ ಸುರೇಂದ್ರ ನಿಧನರಾದರು. ಸಾಲ ಮರು ಪಾವತಿ ಮಾಡುವುದಕ್ಕೂ ಮುನ್ನವೇ ಸುರೇಂದ್ರ ನಿಧನರಾದ್ದರಿಂದ, ಸಾಲದ ಹೊಣೆ ಸುನಂದಾ, ಶಿಲ್ಪಾ, ಶಮಿತಾ ಅವರ ಮೇಲಿತ್ತು. ಆದರೆ, ತಾವು ಹಣ ಪಡೆದಿಲ್ಲವೆಂದು ಸಾಲ ಮರುಪಾವತಿಸಲು ನಿರಾಕರಿಸಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>