ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರಾವತಿ ಸಂಸದೆಯ ಜಾತಿ ಪ್ರಮಾಣಪತ್ರ ರದ್ದುಪಡಿಸಿದ ಬಾಂಬೆ ಹೈಕೋರ್ಟ್

Last Updated 8 ಜೂನ್ 2021, 12:38 IST
ಅಕ್ಷರ ಗಾತ್ರ

ಮುಂಬೈ: ಅಮರಾವತಿ ಲೋಕಸಭಾ ಕ್ಷೇತ್ರದ ಸದಸ್ಯೆ ನವನೀತ್ ಕೌರ್ ರಾಣಾ ಅವರಿಗೆ ನೀಡಿರುವ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಬಾಂಬೆ ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.

ನ್ಯಾಯಮೂರ್ತಿಗಳಾದ ಆರ್.ಡಿ. ಧನುಕಾ ಮತ್ತು ವಿ.ಜಿ. ಬಿಶ್ತ್ ಅವರಿದ್ದ ವಿಭಾಗೀಯ ಪೀಠವು ಈ ತೀರ್ಪು ನೀಡಿದ್ದು, ₹2 ಲಕ್ಷ ವೆಚ್ಚವನ್ನು ಮಹಾರಾಷ್ಟ್ರ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಎರಡು ವಾರಗಳ ಒಳಗೆ ಪಾವತಿಸುವಂತೆ ಆದೇಶಿಸಿದೆ.

‘ಮೋಚಿ’ ಜಾತಿಗೆ ಸೇರಿದ ರಾಣಾ ಅವರು ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಲಭ್ಯವಿರುವ ವಿವಿಧ ಪ್ರಯೋಜನಗಳನ್ನು ಪಡೆಯುವ ಉದ್ದೇಶದಿಂದ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನು ಮೋಸದಿಂದ ಪಡೆದುಕೊಂಡಿರುವುದನ್ನು ಹೈಕೋರ್ಟ್ ಗಮನಿಸಿದೆ.

ರಾಣಾ ಅವರು 2019ರಲ್ಲಿ ಮಹಾರಾಷ್ಟ್ರದ ಅಮರಾವತಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT