<p class="title"><strong>ಮುಂಬೈ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆಗಾಗಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ನ. 12ರವರೆಗೂ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿ ಬಾಂಬೆ ಹೈಕೋರ್ಟ್ ಆದೇಶಿಸಿದೆ.</p>.<p class="bodytext">ಈ ಮೂಲಕ ನ್ಯಾಯಾಂಗ ಬಂಧನಕ್ಕೆಒಪ್ಪಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.ವಿಶೇಷ ನ್ಯಾಯಾಲಯವು ಶನಿವಾರ ದೇಶಮುಖ್ಗೆ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು.</p>.<p class="bodytext">ಇದನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಮಾಧವ್ ಜಾಮ್ದಾರ್ ನೇತೃತ್ವದ ರಜಾ ಅವಧಿಯ ಪೀಠವು ವಿಚಾರಣೆ ನಡೆಸಿತು.</p>.<p class="bodytext">ದೇಶಮುಖ್ ಪರ ವಕೀಲರಾದ ವಿಕ್ರಮ್ ಚೌಧರಿ ಮತ್ತು ಅನಿಕೇತ್ ನಿಕಮ್ ಅವರು, ಇ.ಡಿ ಮನವಿಯನ್ನು ನಾವು ವಿರೋಧಿಸಿದರೂ, ದೇಶಮುಖ್ ಅವರು ಸ್ವಯಂ ಆಗಿ ಇ.ಡಿ ವಿಚಾರಣೆಗೆ ಒಳಪಡಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.</p>.<p class="bodytext">ಬಹುಕೋಟಿ ಹಣಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಸುದೀರ್ಘ 12 ಗಂಟೆ ವಿಚಾರಣೆಯ ನಂತರ ನ. 1 ರಂದು ಇ.ಡಿ ದೇಶಮುಖ್ ಅವರನ್ನು ಬಂಧಿಸಿತ್ತು. ನ.2 ರಂದು ದೇಶಮುಖ್ ಅವರನ್ನು ನವೆಂಬರ್ 6 ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿತ್ತು.</p>.<p class="bodytext">ಶನಿವಾರ ಮತ್ತೆ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಇ.ಡಿ ಮತ್ತಷ್ಟು ದಿನ ವಶಕ್ಕೆ ನೀಡುವಂತೆ ಕೇಳಿತ್ತು. ಆದರೆ ವಿಶೇಷ ನ್ಯಾಯಾಲಯವು ದೇಶ್ಮುಖ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದನ್ನು ಇ.ಡಿ ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ತನಿಖೆಗಾಗಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ನ. 12ರವರೆಗೂ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿ ಬಾಂಬೆ ಹೈಕೋರ್ಟ್ ಆದೇಶಿಸಿದೆ.</p>.<p class="bodytext">ಈ ಮೂಲಕ ನ್ಯಾಯಾಂಗ ಬಂಧನಕ್ಕೆಒಪ್ಪಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ.ವಿಶೇಷ ನ್ಯಾಯಾಲಯವು ಶನಿವಾರ ದೇಶಮುಖ್ಗೆ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು.</p>.<p class="bodytext">ಇದನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಮಾಧವ್ ಜಾಮ್ದಾರ್ ನೇತೃತ್ವದ ರಜಾ ಅವಧಿಯ ಪೀಠವು ವಿಚಾರಣೆ ನಡೆಸಿತು.</p>.<p class="bodytext">ದೇಶಮುಖ್ ಪರ ವಕೀಲರಾದ ವಿಕ್ರಮ್ ಚೌಧರಿ ಮತ್ತು ಅನಿಕೇತ್ ನಿಕಮ್ ಅವರು, ಇ.ಡಿ ಮನವಿಯನ್ನು ನಾವು ವಿರೋಧಿಸಿದರೂ, ದೇಶಮುಖ್ ಅವರು ಸ್ವಯಂ ಆಗಿ ಇ.ಡಿ ವಿಚಾರಣೆಗೆ ಒಳಪಡಲು ನಿರ್ಧರಿಸಿದ್ದಾರೆ ಎಂದು ತಿಳಿಸಿದರು.</p>.<p class="bodytext">ಬಹುಕೋಟಿ ಹಣಅಕ್ರಮ ವರ್ಗಾವಣೆ ಪ್ರಕರಣದ ಸಂಬಂಧ ಸುದೀರ್ಘ 12 ಗಂಟೆ ವಿಚಾರಣೆಯ ನಂತರ ನ. 1 ರಂದು ಇ.ಡಿ ದೇಶಮುಖ್ ಅವರನ್ನು ಬಂಧಿಸಿತ್ತು. ನ.2 ರಂದು ದೇಶಮುಖ್ ಅವರನ್ನು ನವೆಂಬರ್ 6 ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿತ್ತು.</p>.<p class="bodytext">ಶನಿವಾರ ಮತ್ತೆ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಇ.ಡಿ ಮತ್ತಷ್ಟು ದಿನ ವಶಕ್ಕೆ ನೀಡುವಂತೆ ಕೇಳಿತ್ತು. ಆದರೆ ವಿಶೇಷ ನ್ಯಾಯಾಲಯವು ದೇಶ್ಮುಖ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದನ್ನು ಇ.ಡಿ ಹೈಕೋರ್ಟ್ನಲ್ಲಿ ಪ್ರಶ್ನಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>