ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನನಷ್ಟ ಮೊಕದ್ದಮೆ: ಕಂಗನಾ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್‌

Last Updated 9 ಸೆಪ್ಟೆಂಬರ್ 2021, 5:57 IST
ಅಕ್ಷರ ಗಾತ್ರ

ಮುಂಬೈ: ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಪಡಿಸಲು ನಟಿ ಕಂಗನಾ ರನೌತ್‌ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ವಜಾಗೊಳಿಸಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಗೀತ ರಚನೆಕಾರ, ಲೇಖಕ ಜಾವೇದ್‌ ಅಖ್ತರ್‌ ಅವರು ಕಂಗನಾ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ್ದರು.

ಟಿವಿ ಸಂದರ್ಶನಗಳಲ್ಲಿ ತನ್ನ ವಿರುದ್ಧ ಮಾನಹಾನಿ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಅಖ್ತರ್‌ ಆರೋಪಿಸಿದ್ದರು.

'ಅಖ್ತರ್‌ ದೂರಿನ ಅನ್ವಯ ಪೊಲೀಸರು ನಡೆಸಿರುವ ತನಿಖೆ ಏಕಪಕ್ಷೀಯವಾಗಿದೆ. ನನ್ನ ಕಕ್ಷಿದಾರರ ವಿಚಾರಣೆಯನ್ನೇ ನಡೆಸಿಲ್ಲ' ಎಂದು ಕಂಗನಾ ಪರ ವಕೀಲರಾದ ಸಿದ್ದಿಕಿ ಈ ಹಿಂದೆ ಹೈಕೋರ್ಟ್‌ಗೆ ತಿಳಿಸಿದ್ದರು ಹಾಗೂ ಮೊಕದ್ದಮೆ ರದ್ದುಪಡಿಸಲು ಮನವಿ ಮಾಡಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್‌ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT