ಹಡಗಿನಲ್ಲಿ ಡ್ರಗ್ಸ್ ಪ್ರಕರಣ ಕುರಿತು ದಾಳಿ ನಡೆಸಿದ್ದ ತಂಡದ ನೇತೃತ್ವವನ್ನು ಸಮೀರ್ ವಾಂಖೆಡೆ ವಹಿಸಿದ್ದರು. ಈ ಪ್ರಕರಣದಲ್ಲಿ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಸೇರಿ 19 ಮಂದಿ ಆರೋಪಿಗಳಾಗಿದ್ದಾರೆ. ‘ಇದೊಂದು ನಕಲಿ ಪ್ರಕರಣ’ ಎಂದು ಪ್ರತಿಪಾದಿಸಿರುವ ಸಚಿವ ನವಾಬ್ ಮಲ್ಲಿಕ್ ಅವರು ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ವಾಗ್ದಾಳಿ ನಡೆಸಿದ್ದರು.