<p><strong>ಕೋಲ್ಕತ್ತ:</strong> ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಮನೆಯ ಸಮೀಪದಲ್ಲಿ ಇಂದು ಬೆಳಗ್ಗೆ ಮೂರು ಕಚ್ಚಾ ಬಾಂಬ್ಗಳನ್ನು ಎಸೆಯಲಾಗಿದೆ.</p>.<p>ಕೋಲ್ಕತ್ತದಿಂದ ಸುಮಾರು 100 ಕಿ.ಮೀ. ದೂರದ ಜಗತ್ದಲ್ನಲ್ಲಿರುವ ಅರ್ಜುನ್ ಸಿಂಗ್ ಅವರ ಮನೆಯ ಗೇಟ್ಗೆ ಬಾಂಬ್ಗಳು ಅಪ್ಪಳಿಸಿದ್ದು, ಕಬ್ಬಿಣದ ಗೇಟ್ಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗ್ಗೆ 6:30ಕ್ಕೆ ಬಾಂಬ್ಗಳು ಸ್ಫೋಟಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.</p>.<p>ಸಂಸದ ಅರ್ಜುನ್ ಸಿಂಗ್ ಪ್ರಸ್ತುತ ದೆಹಲಿಯಲ್ಲಿದ್ದು, ಘಟನೆಯ ಕುರಿತು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಬಿಜೆಪಿ ಮುಖಂಡ ದಿಲೀಪ್ ಘೋಷ್, ಹಂತಕರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಗೆ ಸೇರಿದವರು ಆಗಿರಬಹುದು ಎಂದು ಆರೋಪಿಸಿದ್ದಾರೆ.</p>.<p>ಸೂಕ್ತ ಕ್ರಮಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರು ಬಂಗಾಳದ ಪೊಲೀಸರಿಗೆ ಆಗ್ರಹಿಸಿದ್ದಾರೆ. 'ಪಶ್ಚಿಮ ಬಂಗಾಳದಲ್ಲಿ ಉದ್ದೇಶಪೂರ್ವಕ ಹಿಂಸಾಚಾರಗಳು ಕಡಿಮೆಯಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಸಂಸದ ಅರ್ಜುನ್ ಸಿಂಗ್ ಅವರ ಮನೆಯ ಹೊರಗೆ ಇಂದು ಬೆಳಿಗ್ಗೆ ಬಾಂಬ್ ಸ್ಫೋಟ ಆಗಿರುವುದು ಕಾನೂನು ಮತ್ತು ಸುವ್ಯವಸ್ಥೆಯ ಕುರಿತು ಚಿಂತೆಗೀಡು ಮಾಡಿದೆ. ಬಂಗಾಳದ ಪೊಲೀಸರಿಂದ ಸೂಕ್ತ ಕ್ರಮವನ್ನು ನಿರೀಕ್ಷಿಸುತ್ತೇನೆ' ಎಂದಿದ್ದಾರೆ.</p>.<p>ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್ ಮಾಡಿ, ಅವರ ಭದ್ರತೆಯ ಕುರಿತು ಈ ಹಿಂದೆಯೂ ಪ್ರಸ್ತಾಪಿಸಲಾಗಿತ್ತು ಎಂದು ಟ್ವೀಟಿಸಿದ್ದಾರೆ.</p>.<p>ಬಂಗಾಳ ಬಿಜೆಪಿಯಲ್ಲಿನ ಆಂತರಿಕ ವೈಷಮ್ಯದಿಂದಾಗಿ ಬಾಂಬ್ ಸ್ಫೋಟ ನಡೆದಿರುವುದಾಗಿ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿರುವುದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಮನೆಯ ಸಮೀಪದಲ್ಲಿ ಇಂದು ಬೆಳಗ್ಗೆ ಮೂರು ಕಚ್ಚಾ ಬಾಂಬ್ಗಳನ್ನು ಎಸೆಯಲಾಗಿದೆ.</p>.<p>ಕೋಲ್ಕತ್ತದಿಂದ ಸುಮಾರು 100 ಕಿ.ಮೀ. ದೂರದ ಜಗತ್ದಲ್ನಲ್ಲಿರುವ ಅರ್ಜುನ್ ಸಿಂಗ್ ಅವರ ಮನೆಯ ಗೇಟ್ಗೆ ಬಾಂಬ್ಗಳು ಅಪ್ಪಳಿಸಿದ್ದು, ಕಬ್ಬಿಣದ ಗೇಟ್ಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗ್ಗೆ 6:30ಕ್ಕೆ ಬಾಂಬ್ಗಳು ಸ್ಫೋಟಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.</p>.<p>ಸಂಸದ ಅರ್ಜುನ್ ಸಿಂಗ್ ಪ್ರಸ್ತುತ ದೆಹಲಿಯಲ್ಲಿದ್ದು, ಘಟನೆಯ ಕುರಿತು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಬಿಜೆಪಿ ಮುಖಂಡ ದಿಲೀಪ್ ಘೋಷ್, ಹಂತಕರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಗೆ ಸೇರಿದವರು ಆಗಿರಬಹುದು ಎಂದು ಆರೋಪಿಸಿದ್ದಾರೆ.</p>.<p>ಸೂಕ್ತ ಕ್ರಮಕೈಗೊಳ್ಳುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರು ಬಂಗಾಳದ ಪೊಲೀಸರಿಗೆ ಆಗ್ರಹಿಸಿದ್ದಾರೆ. 'ಪಶ್ಚಿಮ ಬಂಗಾಳದಲ್ಲಿ ಉದ್ದೇಶಪೂರ್ವಕ ಹಿಂಸಾಚಾರಗಳು ಕಡಿಮೆಯಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಸಂಸದ ಅರ್ಜುನ್ ಸಿಂಗ್ ಅವರ ಮನೆಯ ಹೊರಗೆ ಇಂದು ಬೆಳಿಗ್ಗೆ ಬಾಂಬ್ ಸ್ಫೋಟ ಆಗಿರುವುದು ಕಾನೂನು ಮತ್ತು ಸುವ್ಯವಸ್ಥೆಯ ಕುರಿತು ಚಿಂತೆಗೀಡು ಮಾಡಿದೆ. ಬಂಗಾಳದ ಪೊಲೀಸರಿಂದ ಸೂಕ್ತ ಕ್ರಮವನ್ನು ನಿರೀಕ್ಷಿಸುತ್ತೇನೆ' ಎಂದಿದ್ದಾರೆ.</p>.<p>ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟ್ಯಾಗ್ ಮಾಡಿ, ಅವರ ಭದ್ರತೆಯ ಕುರಿತು ಈ ಹಿಂದೆಯೂ ಪ್ರಸ್ತಾಪಿಸಲಾಗಿತ್ತು ಎಂದು ಟ್ವೀಟಿಸಿದ್ದಾರೆ.</p>.<p>ಬಂಗಾಳ ಬಿಜೆಪಿಯಲ್ಲಿನ ಆಂತರಿಕ ವೈಷಮ್ಯದಿಂದಾಗಿ ಬಾಂಬ್ ಸ್ಫೋಟ ನಡೆದಿರುವುದಾಗಿ ತೃಣಮೂಲ ಕಾಂಗ್ರೆಸ್ ಪ್ರತಿಕ್ರಿಯಿಸಿರುವುದಾಗಿ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>