ಈ ದಾಳಿಯ ಹಿಂದೆ ತೃಣಮೂಲ ಕಾಂಗ್ರೆಸ್ ರಕ್ಷಣೆಯಲ್ಲಿರುವ ಗೂಂಡಾಗಳ ಕೈವಾಡವಿದೆ ಎಂದು ಸಿಂಗ್ ಆರೋಪಿಸಿದ್ದಾರೆ. ಟಿಎಂಸಿ ಗೂಂಡಾಗಳಿಗೆ ಆಶ್ರಯ ನೀಡುತ್ತಿದೆ, ಆದ್ದರಿಂದಲೇ ಪದೇ ಪದೇ ದಾಳಿಗಳು ನಡೆಯುತ್ತಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಆಡಳಿತಾರೂಢ ಟಿಎಂಸಿಯ ಸದಸ್ಯರು ನನ್ನ ಜೀವ ತೆಗೆಯಲು ಪ್ರಯತ್ನಿಸುತ್ತಿದ್ದಾರೆ ಎಂದೂ ಅವರು ಆರೋಪ ಮಾಡಿದ್ದಾರೆ.