ನೈನಿತಾಲ್, ಉತ್ತರಾಖಂಡ: ಅತ್ಯಾಚಾರ ಪ್ರಕರಣ ದಾಖಲಾಗಿದ್ದ ಉತ್ತರಾಖಂಡದ ಜ್ವಾಲಾಪುರ್ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ರಾಥೋಡ್, ಬಂಧನದ ವಿರುದ್ಧ ರಕ್ಷಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪಕ್ಷದ ಕಾರ್ಯಕರ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಇವರ ಮೇಲಿದೆ. ಉತ್ತರಾಖಂಡ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರ ಪರ ವಕೀಲ ಆದಿತ್ಯ ಪ್ರತಾಪ್ ತಿಳಿಸಿದ್ದಾರೆ.