<p><strong>ನವದೆಹಲಿ: </strong>ಮತ ಕೇಂದ್ರಗಳನ್ನು ವಶಪಡಿಸಿಕೊಳ್ಳುವ ಅಥವಾ ನಕಲಿ ಮತ ಚಲಾವಣೆಗೆ ಯತ್ನದಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.</p>.<p>‘ಇಂಥ ಚುನಾವಣಾ ಅಕ್ರಮಗಳು ಕಾನೂನು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುತ್ತವೆ. ಮತ ಚಲಾಯಿಸುವ ಸ್ವಾತಂತ್ರ್ಯ ಕೂಡ ವಾಕ್ ಸ್ವಾತಂತ್ರ್ಯದ ಭಾಗವೇ ಆಗಿದೆ ’ ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರಿರುವ ನ್ಯಾಯಪೀಠ ಹೇಳಿದೆ.</p>.<p>ಜಾರ್ಖಂಡ್ನಲ್ಲಿ ಚುನಾವಣೆ ವೇಳೆ ಮತದಾನ ಕೇಂದ್ರದಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಪೀಠ, ಈ ಪ್ರತಿಪಾದನೆ ಮಾಡಿದೆ.</p>.<p>‘ಮತದಾರರಿಗೆ ಅವರ ಆಯ್ಕೆಯಂತೆ ಮತ ಚಲಾಯಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸುವುದೇ ಚುನಾವಣಾ ವ್ಯವಸ್ಥೆಯ ತಿರುಳು. ಈ ಹಿನ್ನೆಲೆಯಲ್ಲಿ ಮತ ಕೇಂದ್ರಗಳನ್ನು ವಶಪಡಿಸಿಕೊಳ್ಳುವ, ನಕಲಿ ಮತ ಚಲಾಯಿಸುವ ಯತ್ನಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಅಗತ್ಯ’ ಎಂದು ನ್ಯಾಯಪೀಠ ಹೇಳಿದೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/supreme-court-dismisses-applications-of-telecom-majors-calculation-of-agr-related-dues-850845.html">ಎಜಿಆರ್ ಬಾಕಿ: ಟೆಲಿಕಾಂ ಕಂಪನಿಗಳ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’</a></p>.<p>‘ಮತದಾನಕ್ಕೆ ಸಂಬಂಧಿಸಿ ಗೌಪ್ಯವನ್ನು ಕಾಪಾಡುವುದು, ಮತದಾರ ನಿರ್ಭೀತಿಯಿಂದ ಮತ ಚಲಾವಣೆ ಮಾಡುವುದನ್ನು ಖಾತರಿ ಪಡಿಸುವುದು ಸಹ ಅಷ್ಟೇ ಮುಖ್ಯ. ಒಂದು ವೇಳೆ ಯಾರಿಗೆ ಮತ ಹಾಕಲಾಗಿದೆ ಎಂಬುದು ಬಹಿರಂಗಗೊಂಡಿದ್ದೇ ಆದಲ್ಲಿ, ಅದು ಮತದಾರರನ್ನು ಬಲಿಪಶು ಮಾಡಿದಂತಾಗುತ್ತದೆ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮತ ಕೇಂದ್ರಗಳನ್ನು ವಶಪಡಿಸಿಕೊಳ್ಳುವ ಅಥವಾ ನಕಲಿ ಮತ ಚಲಾವಣೆಗೆ ಯತ್ನದಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.</p>.<p>‘ಇಂಥ ಚುನಾವಣಾ ಅಕ್ರಮಗಳು ಕಾನೂನು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುತ್ತವೆ. ಮತ ಚಲಾಯಿಸುವ ಸ್ವಾತಂತ್ರ್ಯ ಕೂಡ ವಾಕ್ ಸ್ವಾತಂತ್ರ್ಯದ ಭಾಗವೇ ಆಗಿದೆ ’ ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರಿರುವ ನ್ಯಾಯಪೀಠ ಹೇಳಿದೆ.</p>.<p>ಜಾರ್ಖಂಡ್ನಲ್ಲಿ ಚುನಾವಣೆ ವೇಳೆ ಮತದಾನ ಕೇಂದ್ರದಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಪೀಠ, ಈ ಪ್ರತಿಪಾದನೆ ಮಾಡಿದೆ.</p>.<p>‘ಮತದಾರರಿಗೆ ಅವರ ಆಯ್ಕೆಯಂತೆ ಮತ ಚಲಾಯಿಸುವ ಸ್ವಾತಂತ್ರ್ಯವನ್ನು ಖಾತರಿಪಡಿಸುವುದೇ ಚುನಾವಣಾ ವ್ಯವಸ್ಥೆಯ ತಿರುಳು. ಈ ಹಿನ್ನೆಲೆಯಲ್ಲಿ ಮತ ಕೇಂದ್ರಗಳನ್ನು ವಶಪಡಿಸಿಕೊಳ್ಳುವ, ನಕಲಿ ಮತ ಚಲಾಯಿಸುವ ಯತ್ನಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಅಗತ್ಯ’ ಎಂದು ನ್ಯಾಯಪೀಠ ಹೇಳಿದೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/supreme-court-dismisses-applications-of-telecom-majors-calculation-of-agr-related-dues-850845.html">ಎಜಿಆರ್ ಬಾಕಿ: ಟೆಲಿಕಾಂ ಕಂಪನಿಗಳ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’</a></p>.<p>‘ಮತದಾನಕ್ಕೆ ಸಂಬಂಧಿಸಿ ಗೌಪ್ಯವನ್ನು ಕಾಪಾಡುವುದು, ಮತದಾರ ನಿರ್ಭೀತಿಯಿಂದ ಮತ ಚಲಾವಣೆ ಮಾಡುವುದನ್ನು ಖಾತರಿ ಪಡಿಸುವುದು ಸಹ ಅಷ್ಟೇ ಮುಖ್ಯ. ಒಂದು ವೇಳೆ ಯಾರಿಗೆ ಮತ ಹಾಕಲಾಗಿದೆ ಎಂಬುದು ಬಹಿರಂಗಗೊಂಡಿದ್ದೇ ಆದಲ್ಲಿ, ಅದು ಮತದಾರರನ್ನು ಬಲಿಪಶು ಮಾಡಿದಂತಾಗುತ್ತದೆ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>