<p><strong>ಮುಂಬೈ</strong>: ಗಡಿ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಪೊಲೀಸರ ಸಲಹೆ ಮೇರೆಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆಯು(ಎಂಎಸ್ಆರ್ಟಿಸಿ) ಕರ್ನಾಟಕಕ್ಕೆ ಬಸ್ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪಿಟಿಐ ಜೊತೆ ಮಾತನಾಡಿದ ಎಂಎಸ್ಆರ್ಟಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶೇಖರ್ ಚನ್ನೆ, ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆ ಮತ್ತು ಅವರಿಗೆ ಆಗಬಹುದಾದ ನಷ್ಟ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಪೊಲೀಸರ ಸಲಹೆ ಮೇರೆಗೆ ಮಂಗಳವಾರ ಮಧ್ಯಾಹ್ನದಿಂದ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಆದರೆ, ಬಸ್ ಸೌಲಭ್ಯ ಎಲ್ಲಿಯವರೆಗೆ ಸ್ಥಗಿತಗೊಳ್ಳಲಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.</p>.<p><strong>ಕರವೇ ಪ್ರತಿಭಟನೆ</strong></p>.<p>ಗಡಿ ವಿಚಾರವಾಗಿ ಮಹಾರಾಷ್ಟ್ರದ ನಿಲುವು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಿರೇಬಾಗೆವಾಡಿಯಲ್ಲಿ ಪ್ರತಿಭಟನೆ ನಡೆಸಿತು. ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ಇಲ್ಲಿನ ಟೋಲ್ಗೇಟ್ ಬಳಿಯೇ ವಶಕ್ಕೆ ಪಡೆದರು.</p>.<p>ಕಾರ್, ಜೀಪ್ ಸೇರಿದಂತೆ 110 ವಾಹನಗಳಲ್ಲಿ ಬೆಳಗಾವಿಯತ್ತ ಬಂದ 400ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ತಡೆದರು. ದೂರದಲ್ಲೇ ವಾಹನ ನಿಲ್ಲಿಸಿ ಪ್ರತಿಭಟನಾ ರ್ಯಾಲಿ ಆರಂಭಿಸಿದ ಕಾರ್ಯಕರ್ತರು, ಟೋಲ್ಗೇಟ್ ದಾಟಿ ಬೆಳಗಾವಿಯತ್ತ ನುಗ್ಗಲು ಯತ್ನಿಸಿದರು.</p>.<p>ಬ್ಯಾರಿಕೇಡ್ಗಳನ್ನು ಇಟ್ಟು, ಲಾಠಿ ಹಿಡಿದು ಸಜ್ಜುಗೊಂಡಿದ್ದ ಪೊಲೀಸರು ಎಲ್ಲರನ್ನೂ ತಡೆದರು. ತೀವ್ರ ಆಕ್ರೋಶಗೊಂಡ ಕಾರ್ಯಕರ್ತರು ಪೊಲೀಸರ ವಿರುದ್ಧ ಘೋಷಣೆ ಮೊಳಗಿಸಿದರು.</p>.<p>ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಸಲುವಾಗಿ ಪೊಲೀಸರು ಎಂಟು ಸರ್ಕಾರಿ ಬಸ್ಗಳನ್ನು ಸ್ಥಳದಲ್ಲಿ ನಿಲ್ಲಿಸಿದ್ದರು. ಮುಖಂಡರು ಬ್ಯಾರಿಕೇಡ್ ತಳ್ಳಿ ಮುನ್ನುಗ್ಗಲು ಯತ್ನಿಸಿದಾಗ ಎಲ್ಲರನ್ನೂ ವಶಕ್ಕೆ ಪಡೆದು ಬಸ್ಗಳಲ್ಲಿ ಹತ್ತಿಸಿದರು.</p>.<p>ತಮ್ಮ ನಾಯಕರ ಬಂಧನ ಖಂಡಿಸಿ ಮತ್ತೆ ಕೆಲ ಕಾರ್ಯಕರ್ತರು ಬಸ್ಸಿನ ಚಕ್ರದಡಿ ಮಲಗಿ ಪ್ರತಿಭಟನೆ ನಡೆಸಿದರು. ಅವರನ್ನು ಹೊರಗೆಳೆದ ನಂತರ ಬಸ್ಗಳನ್ನು ಸ್ಥಳದಿಂದ ಬಿಡಲಾಯಿತು. ಇನ್ನೂರು ಮಂದಿಯನ್ನು ವಶಕ್ಕೆ ಪಡೆದ ನಂತರ, ಉಳಿದ ಇನ್ನೂರು ಮಂದಿ ಬ್ಯಾರಿಕೇಡ್ಗಳ ಆಚೆಗೇ ನಿಂತು ಕೂಗಾಡಿದರು.</p>.<p>ಇದೇ ವೇಳೆ ಹೆದ್ದಾರಿಯಲ್ಲಿ ಬಂದ ಮಹಾರಾಷ್ಟ್ರದ ನೋಂದಣಿ ಇರುವ ಲಾರಿಯೊಂದನ್ನು ತಡೆದ ಪ್ರತಿಭಟನಾಕಾರರು, ಅದರ ಮೇಲೆ ಹತ್ತಿ ಕನ್ನಡ ಧ್ವಜ ಹಾರಿಸಿದರು. ಈ ಮಾರ್ಗದಲ್ಲಿ ಬಂದ ಎಲ್ಲ ವಾಹನಗಳನ್ನು ತಡೆದು ಮಹಾರಾಷ್ಟ್ರಕ್ಕೆ ಧಿಕ್ಕಾರ ಕೂಗಿದರು.</p>.<p>ಲಾರಿಯೊಂದಕ್ಕೆ ಕಲ್ಲೆಸೆದ ಪ್ರತಿಭಟನಾಕಾರರು, ಗಾಜು ಪುಡಿಪುಡಿ ಮಾಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಲಾಠಿ ಬೀಸಿ ಎಲ್ಲರನ್ನೂ ಚದುರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಗಡಿ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಪೊಲೀಸರ ಸಲಹೆ ಮೇರೆಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆಯು(ಎಂಎಸ್ಆರ್ಟಿಸಿ) ಕರ್ನಾಟಕಕ್ಕೆ ಬಸ್ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪಿಟಿಐ ಜೊತೆ ಮಾತನಾಡಿದ ಎಂಎಸ್ಆರ್ಟಿಸಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶೇಖರ್ ಚನ್ನೆ, ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರ ಸುರಕ್ಷತೆ ಮತ್ತು ಅವರಿಗೆ ಆಗಬಹುದಾದ ನಷ್ಟ ತಡೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಪೊಲೀಸರ ಸಲಹೆ ಮೇರೆಗೆ ಮಂಗಳವಾರ ಮಧ್ಯಾಹ್ನದಿಂದ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಆದರೆ, ಬಸ್ ಸೌಲಭ್ಯ ಎಲ್ಲಿಯವರೆಗೆ ಸ್ಥಗಿತಗೊಳ್ಳಲಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.</p>.<p><strong>ಕರವೇ ಪ್ರತಿಭಟನೆ</strong></p>.<p>ಗಡಿ ವಿಚಾರವಾಗಿ ಮಹಾರಾಷ್ಟ್ರದ ನಿಲುವು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಿರೇಬಾಗೆವಾಡಿಯಲ್ಲಿ ಪ್ರತಿಭಟನೆ ನಡೆಸಿತು. ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ಇಲ್ಲಿನ ಟೋಲ್ಗೇಟ್ ಬಳಿಯೇ ವಶಕ್ಕೆ ಪಡೆದರು.</p>.<p>ಕಾರ್, ಜೀಪ್ ಸೇರಿದಂತೆ 110 ವಾಹನಗಳಲ್ಲಿ ಬೆಳಗಾವಿಯತ್ತ ಬಂದ 400ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ತಡೆದರು. ದೂರದಲ್ಲೇ ವಾಹನ ನಿಲ್ಲಿಸಿ ಪ್ರತಿಭಟನಾ ರ್ಯಾಲಿ ಆರಂಭಿಸಿದ ಕಾರ್ಯಕರ್ತರು, ಟೋಲ್ಗೇಟ್ ದಾಟಿ ಬೆಳಗಾವಿಯತ್ತ ನುಗ್ಗಲು ಯತ್ನಿಸಿದರು.</p>.<p>ಬ್ಯಾರಿಕೇಡ್ಗಳನ್ನು ಇಟ್ಟು, ಲಾಠಿ ಹಿಡಿದು ಸಜ್ಜುಗೊಂಡಿದ್ದ ಪೊಲೀಸರು ಎಲ್ಲರನ್ನೂ ತಡೆದರು. ತೀವ್ರ ಆಕ್ರೋಶಗೊಂಡ ಕಾರ್ಯಕರ್ತರು ಪೊಲೀಸರ ವಿರುದ್ಧ ಘೋಷಣೆ ಮೊಳಗಿಸಿದರು.</p>.<p>ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಸಲುವಾಗಿ ಪೊಲೀಸರು ಎಂಟು ಸರ್ಕಾರಿ ಬಸ್ಗಳನ್ನು ಸ್ಥಳದಲ್ಲಿ ನಿಲ್ಲಿಸಿದ್ದರು. ಮುಖಂಡರು ಬ್ಯಾರಿಕೇಡ್ ತಳ್ಳಿ ಮುನ್ನುಗ್ಗಲು ಯತ್ನಿಸಿದಾಗ ಎಲ್ಲರನ್ನೂ ವಶಕ್ಕೆ ಪಡೆದು ಬಸ್ಗಳಲ್ಲಿ ಹತ್ತಿಸಿದರು.</p>.<p>ತಮ್ಮ ನಾಯಕರ ಬಂಧನ ಖಂಡಿಸಿ ಮತ್ತೆ ಕೆಲ ಕಾರ್ಯಕರ್ತರು ಬಸ್ಸಿನ ಚಕ್ರದಡಿ ಮಲಗಿ ಪ್ರತಿಭಟನೆ ನಡೆಸಿದರು. ಅವರನ್ನು ಹೊರಗೆಳೆದ ನಂತರ ಬಸ್ಗಳನ್ನು ಸ್ಥಳದಿಂದ ಬಿಡಲಾಯಿತು. ಇನ್ನೂರು ಮಂದಿಯನ್ನು ವಶಕ್ಕೆ ಪಡೆದ ನಂತರ, ಉಳಿದ ಇನ್ನೂರು ಮಂದಿ ಬ್ಯಾರಿಕೇಡ್ಗಳ ಆಚೆಗೇ ನಿಂತು ಕೂಗಾಡಿದರು.</p>.<p>ಇದೇ ವೇಳೆ ಹೆದ್ದಾರಿಯಲ್ಲಿ ಬಂದ ಮಹಾರಾಷ್ಟ್ರದ ನೋಂದಣಿ ಇರುವ ಲಾರಿಯೊಂದನ್ನು ತಡೆದ ಪ್ರತಿಭಟನಾಕಾರರು, ಅದರ ಮೇಲೆ ಹತ್ತಿ ಕನ್ನಡ ಧ್ವಜ ಹಾರಿಸಿದರು. ಈ ಮಾರ್ಗದಲ್ಲಿ ಬಂದ ಎಲ್ಲ ವಾಹನಗಳನ್ನು ತಡೆದು ಮಹಾರಾಷ್ಟ್ರಕ್ಕೆ ಧಿಕ್ಕಾರ ಕೂಗಿದರು.</p>.<p>ಲಾರಿಯೊಂದಕ್ಕೆ ಕಲ್ಲೆಸೆದ ಪ್ರತಿಭಟನಾಕಾರರು, ಗಾಜು ಪುಡಿಪುಡಿ ಮಾಡಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಲಾಠಿ ಬೀಸಿ ಎಲ್ಲರನ್ನೂ ಚದುರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>