ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಡಿ ತರಲು ತಡ ಮಾಡಿದ್ದಕ್ಕೆ ಮಗನಿಗೆ ಬೆಂಕಿ ಹಚ್ಚಿದ ತಂದೆ!

Last Updated 21 ಜನವರಿ 2021, 11:07 IST
ಅಕ್ಷರ ಗಾತ್ರ

ಹೈದರಾಬಾದ್‌: ‘ಅಂಗಡಿಯಿಂದ ಬೀಡಿ ತರಲು ತಡಮಾಡಿದ ಎಂದು ವ್ಯಕ್ತಿಯೊಬ್ಬ 10 ವರ್ಷದ ಮಗನಿಗೆ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ’ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

‘ಮಗ ಸರಿಯಾಗಿ ಓದುತ್ತಿಲ್ಲ ಎಂಬ ಕೋಪವೂ ಆ ವ್ಯಕ್ತಿಗಿತ್ತು. 17ರ ರಾತ್ರಿ ಮಗನ ಮೇಲೆ ಟರ್ಪೆಂಟೈನ್‌ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಆಸ್ಪತ್ರೆಗೆ ಸೇರಿಸಿದ್ದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ವ್ಯಕ್ತಿಯು ಮದ್ಯ ವ್ಯಸನಿಯಾಗಿದ್ದ ಎಂಬುದು ತಿಳಿದುಬಂದಿದೆ. ಆತನನ್ನು ಬಂಧಿಸಿದ್ದು, ಸದ್ಯ ಜೈಲಿನಲ್ಲಿದ್ದಾನೆ’ ಎಂದೂ ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT