<p><strong>ನವದೆಹಲಿ:</strong> 17 ವರ್ಷದ ಹುಡುಗನನ್ನು ಆತನ ಶಾಲೆಯ ಕಿರಿಯ ವಿದ್ಯಾರ್ಥಿಯೇ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p>ಆಗ್ನೇಯ ದೆಹಲಿಯ ಓಖ್ಲಾ ಪ್ರದೇಶದಲ್ಲಿ ತೆಹಖಂಡದ ಸರ್ಕಾರಿ ಶಾಲೆಯ ಹೊರಗೆ ಶುಕ್ರವಾರ ಘಟನೆ ನಡೆದಿದೆ.</p>.<p>ಮೃತ ವಿದ್ಯಾರ್ಥಿಯು ಆರೋಪಿಯ ತಾಯಿಯನ್ನು ನಿಂದಿಸಿದ್ದಾನೆ. ಆಕೆಯ ಕ್ಷಮೆ ಕೇಳಲು ನಿರಾಕರಿಸಿದಾಗ ಆತನಿಗೆ ಇರಿಯಲಾಗಿದೆ. ಸದ್ಯ ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಘಟನೆ ನಡೆದಾಗ ಇಬ್ಬರು ವಿದ್ಯಾರ್ಥಿಗಳು ಶಾಲಾ ಸಮವಸ್ತ್ರದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>11ನೇ ತರಗತಿಯ ವಿದ್ಯಾರ್ಥಿಗೆ ಮೂರು ಇರಿತದ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.</p>.<p>ವಿಚಾರಣೆಯ ಸಮಯದಲ್ಲಿ, 15 ವರ್ಷದ ಹುಡುಗ ಸಂತ್ರಸ್ತ ಶಾಲೆ ಮುಗಿಸಿ ತಿರುಗಾಡುತ್ತಿದ್ದಾಗ ಇರಿದಿರುವುದಾಗಿ ತಿಳಿಸಿದ್ದಾನೆ. ಆರೋಪಿ ಬಾಲಕ 10 ನೇ ತರಗತಿಯ ವಿದ್ಯಾರ್ಥಿ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 17 ವರ್ಷದ ಹುಡುಗನನ್ನು ಆತನ ಶಾಲೆಯ ಕಿರಿಯ ವಿದ್ಯಾರ್ಥಿಯೇ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p>.<p>ಆಗ್ನೇಯ ದೆಹಲಿಯ ಓಖ್ಲಾ ಪ್ರದೇಶದಲ್ಲಿ ತೆಹಖಂಡದ ಸರ್ಕಾರಿ ಶಾಲೆಯ ಹೊರಗೆ ಶುಕ್ರವಾರ ಘಟನೆ ನಡೆದಿದೆ.</p>.<p>ಮೃತ ವಿದ್ಯಾರ್ಥಿಯು ಆರೋಪಿಯ ತಾಯಿಯನ್ನು ನಿಂದಿಸಿದ್ದಾನೆ. ಆಕೆಯ ಕ್ಷಮೆ ಕೇಳಲು ನಿರಾಕರಿಸಿದಾಗ ಆತನಿಗೆ ಇರಿಯಲಾಗಿದೆ. ಸದ್ಯ ಆರೋಪಿ ಬಾಲಕನನ್ನು ಬಂಧಿಸಲಾಗಿದೆ. ಘಟನೆ ನಡೆದಾಗ ಇಬ್ಬರು ವಿದ್ಯಾರ್ಥಿಗಳು ಶಾಲಾ ಸಮವಸ್ತ್ರದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>11ನೇ ತರಗತಿಯ ವಿದ್ಯಾರ್ಥಿಗೆ ಮೂರು ಇರಿತದ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.</p>.<p>ವಿಚಾರಣೆಯ ಸಮಯದಲ್ಲಿ, 15 ವರ್ಷದ ಹುಡುಗ ಸಂತ್ರಸ್ತ ಶಾಲೆ ಮುಗಿಸಿ ತಿರುಗಾಡುತ್ತಿದ್ದಾಗ ಇರಿದಿರುವುದಾಗಿ ತಿಳಿಸಿದ್ದಾನೆ. ಆರೋಪಿ ಬಾಲಕ 10 ನೇ ತರಗತಿಯ ವಿದ್ಯಾರ್ಥಿ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>