ಕೋಲ್ಕತ್ತ: ಎಲ್ಲ ರಾಜ್ಯಗಳಲ್ಲಿರುವ ಬೇರೆ ಪಕ್ಷಗಳ ಸರ್ಕಾರಗಳನ್ನು ಉರುಳಿಸುವುದೇ ಬಿಜೆಪಿಯ ಕೆಲಸ ಎಂದುಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗುರುವಾರ ವಾಗ್ದಾಳಿ ನಡೆಸಿದ್ದಾರೆ.
'ಇದು (ಸರ್ಕಾರಗಳನ್ನು ಒಡೆಯುವುದು) ಬಿಜೆಪಿಯ ಕೆಲಸವಾಗಿದೆ. ಪಶ್ಚಿಮ ಬಂಗಾಳದಲ್ಲಿ ನಮ್ಮನ್ನು ಮಣಿಸಲು ಅವರು (ಬಿಜೆಪಿ) ಪ್ರಯತ್ನಿಸಿದರೂ, ಯಶಸ್ಸು ಕಾಣಲು ಸಾಧ್ಯವಾಗಲಿಲ್ಲ' ಎಂದು ಹೇಳಿದ್ದಾರೆ.
ದೇಶದಲ್ಲಿನ ಹಣದುಬ್ಬರ ಏರಿಕೆಗೆ ಸಂಬಂಧಿಸಿದಂತೆಯೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, 2024ರ ಸಾರ್ವತ್ರಿಕ ಚುನಾವಣೆ ಬಳಿಕ ಜನರು ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಲಿದ್ದಾರೆ ಎಂದು ಹೇಳಿದ್ದಾರೆ.