<p><strong>ಪನ್ನಾ:</strong> ಸಣ್ಣ ಪ್ರಮಾಣದ ಇಟ್ಟಿಗೆ ಗೂಡು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಗಣಿಯಲ್ಲಿ 26.11 ಕ್ಯಾರೆಟ್ ವಜ್ರ ಲಭ್ಯವಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.</p>.<p>ಬೆಲೆಬಾಳುವ ಈ ಹರಳಿಗೆಹರಾಜಿನಲ್ಲಿ ₹ 1.20 ಕೋಟಿ ವರೆಗೆ ಸಿಗಬಹುದು ಎಂದು ಪನ್ನಾದ ವಜ್ರ ಅಧಿಕಾರಿ ರವಿ ಪಟೇಲ್ ತಿಳಿಸಿದ್ದಾರೆ.</p>.<p>ಪನ್ನಾ ಪಟ್ಟಣದ ಕಿಶೋರ್ಗಂಜ್ ನಿವಾಸಿ ಸುಶೀಲ್ ಶುಕ್ಲಾ ಮತ್ತು ಅವರ ಪಾಲುದಾರರಿಗೆ ಸೋಮವಾರ ಕೃಷ್ಣ ಕಲ್ಯಾಣಪುರ ಪ್ರದೇಶದ ಬಳಿ ಇರುವ ಗಣಿಯಲ್ಲಿ ಬೆಲೆಬಾಳುವ ವಜ್ರವು ದೊರಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಒಂದೆರಡು ದಿನಗಳಲ್ಲಿ ಈ ವಜ್ರವನ್ನು ಹರಾಜಿಗೆ ಇಡಲಾಗುವುದು ಮತ್ತು ಇದರಿಂದ ಬರುವ ಆದಾಯದಲ್ಲಿ ಸರ್ಕಾರದ ರಾಯಧನ ಮತ್ತು ತೆರಿಗೆ ಕಡಿತಗೊಳಿಸಿದ ನಂತರ ಗಣಿಗಾರರಿಗೆ ನೀಡಲಾಗುವುದು ಎಂದು ಅವರು ಹೇಳಿದರು.</p>.<p>'ಕಳೆದ 20 ವರ್ಷಗಳಿಂದ ನಾನು ಮತ್ತು ನನ್ನ ಕುಟುಂಬ ವಜ್ರದ ಗಣಿಗಾರಿಕೆಯಲ್ಲಿ ತೊಡಗಿಕೊಂಡಿದ್ದೇವೆ. ಇದೇ ಮೊದಲ ಬಾರಿಗೆ ಬೆಲೆಬಾಳುವ ವಜ್ರವನ್ನು ಹೊರತೆಗೆಯಲಾಗಿದೆ' ಎಂದು ಶುಕ್ಲಾ ತಿಳಿಸಿದ್ದಾರೆ.</p>.<p>ಕಡಿಮೆ ಆಳವಿರುವ ಗಣಿಯನ್ನು ಇತರೆ ಐವರೊಂದಿಗೆ ಗುತ್ತಿಗೆ ಆಧಾರದ ಮೇಲೆ ಪಡೆದುಕೊಳ್ಳಲಾಗಿತ್ತು. ಇಲ್ಲಿ ವಜ್ರ ದೊರಕಿದ್ದು, ಇದರಿಂದ ₹ 1.2 ಕೋಟಿ ಹಣ ದೊರಕಬಹುದು. ಹರಾಜು ಪ್ರಕ್ರಿಯೆಯಿಂದ ಬರುವ ಹಣವನ್ನು ಉದ್ಯಮ ಸ್ಥಾಪನೆಗೆ ಬಳಸಿಕೊಳ್ಳುತ್ತೇನೆ' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪನ್ನಾ:</strong> ಸಣ್ಣ ಪ್ರಮಾಣದ ಇಟ್ಟಿಗೆ ಗೂಡು ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಗಣಿಯಲ್ಲಿ 26.11 ಕ್ಯಾರೆಟ್ ವಜ್ರ ಲಭ್ಯವಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.</p>.<p>ಬೆಲೆಬಾಳುವ ಈ ಹರಳಿಗೆಹರಾಜಿನಲ್ಲಿ ₹ 1.20 ಕೋಟಿ ವರೆಗೆ ಸಿಗಬಹುದು ಎಂದು ಪನ್ನಾದ ವಜ್ರ ಅಧಿಕಾರಿ ರವಿ ಪಟೇಲ್ ತಿಳಿಸಿದ್ದಾರೆ.</p>.<p>ಪನ್ನಾ ಪಟ್ಟಣದ ಕಿಶೋರ್ಗಂಜ್ ನಿವಾಸಿ ಸುಶೀಲ್ ಶುಕ್ಲಾ ಮತ್ತು ಅವರ ಪಾಲುದಾರರಿಗೆ ಸೋಮವಾರ ಕೃಷ್ಣ ಕಲ್ಯಾಣಪುರ ಪ್ರದೇಶದ ಬಳಿ ಇರುವ ಗಣಿಯಲ್ಲಿ ಬೆಲೆಬಾಳುವ ವಜ್ರವು ದೊರಕಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p>ಒಂದೆರಡು ದಿನಗಳಲ್ಲಿ ಈ ವಜ್ರವನ್ನು ಹರಾಜಿಗೆ ಇಡಲಾಗುವುದು ಮತ್ತು ಇದರಿಂದ ಬರುವ ಆದಾಯದಲ್ಲಿ ಸರ್ಕಾರದ ರಾಯಧನ ಮತ್ತು ತೆರಿಗೆ ಕಡಿತಗೊಳಿಸಿದ ನಂತರ ಗಣಿಗಾರರಿಗೆ ನೀಡಲಾಗುವುದು ಎಂದು ಅವರು ಹೇಳಿದರು.</p>.<p>'ಕಳೆದ 20 ವರ್ಷಗಳಿಂದ ನಾನು ಮತ್ತು ನನ್ನ ಕುಟುಂಬ ವಜ್ರದ ಗಣಿಗಾರಿಕೆಯಲ್ಲಿ ತೊಡಗಿಕೊಂಡಿದ್ದೇವೆ. ಇದೇ ಮೊದಲ ಬಾರಿಗೆ ಬೆಲೆಬಾಳುವ ವಜ್ರವನ್ನು ಹೊರತೆಗೆಯಲಾಗಿದೆ' ಎಂದು ಶುಕ್ಲಾ ತಿಳಿಸಿದ್ದಾರೆ.</p>.<p>ಕಡಿಮೆ ಆಳವಿರುವ ಗಣಿಯನ್ನು ಇತರೆ ಐವರೊಂದಿಗೆ ಗುತ್ತಿಗೆ ಆಧಾರದ ಮೇಲೆ ಪಡೆದುಕೊಳ್ಳಲಾಗಿತ್ತು. ಇಲ್ಲಿ ವಜ್ರ ದೊರಕಿದ್ದು, ಇದರಿಂದ ₹ 1.2 ಕೋಟಿ ಹಣ ದೊರಕಬಹುದು. ಹರಾಜು ಪ್ರಕ್ರಿಯೆಯಿಂದ ಬರುವ ಹಣವನ್ನು ಉದ್ಯಮ ಸ್ಥಾಪನೆಗೆ ಬಳಸಿಕೊಳ್ಳುತ್ತೇನೆ' ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>