‘ರಾಜ್ಯದ ಸ್ಥಾನಮಾನ ನೀಡಿದ ಬಳಿಕವೇ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸಬೇಕು. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಪಂಜಾಬ್ ಸೇರಿದಂತೆ ಈಶಾನ್ಯ ಮತ್ತು ಗಡಿ ಪ್ರದೇಶಗಳಲ್ಲಿನ ಜನರ ಆಶಯದ ವಿರುದ್ಧ ಯಾವುದೇ ನಿರ್ಧಾರಗಳನ್ನು ಕೈಗೊಳ್ಳಬಾರದು. ಬೇರೆ ರಾಜ್ಯಗಳ ಜನರಿಗೆ ಜಮೀನು ಖರೀದಿಸಲು ಅವಕಾಶ ಕಲ್ಪಿಸಿರುವುದರಿಂದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಜನತೆ ಈಗ ಸಂತೋಷದಿಂದ ಬದುಕು ಸಾಗಿಸುತ್ತಿಲ್ಲ’ ಎಂದರು.