ಅಹಮದಾಬಾದ್: ಗಣರಾಜ್ಯೋತ್ಸವದ ಪೂರ್ವಭಾವಿಯಾಗಿ ಭಾರತ–ಪಾಕಿಸ್ತಾನ ಗಡಿಯಲ್ಲಿ ಭದ್ರತೆ ಹೆಚ್ಚಿಸಲು ಗಡಿ ಭದ್ರತಾ ಪಡೆಯು (ಬಿಎಸ್ಎಫ್) ಗುಜರಾತ್ನ ಕಛ್ ಜಿಲ್ಲೆಯಲ್ಲಿ ಮತ್ತು ರಾಜಸ್ಥಾನದ ಬಾರ್ಮರ್ನಲ್ಲಿ ‘ಆಪರೇಷನ್ ಅಲರ್ಟ್’ ತಾಲೀಮು ಆರಂಭಿಸಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ.
‘ರಾಷ್ಟ್ರವಿರೋಧಿ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಈ ತಾಲೀಮನ್ನು ಆರಂಭಿಸಲಾಗಿದೆ. ಇದು ಜನವರಿ 21ರಂದು ಆರಂಭವಾಗಿದ್ದು, 28ರ ವರೆಗೆ ಭಾರತ–ಪಾಕಿಸ್ತಾನ ನಡುವಿನ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ನಡೆಯಲಿದೆ’ ಎಂದು ಬಿಎಸ್ಎಫ್ ಹೇಳಿಕೆಯಲ್ಲಿ ತಿಳಿಸಿದೆ.
ಈ ತಾಲೀಮಿನ ಅಂಗವಾಗಿ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದೂ ಹೇಳಿದೆ.