ಶ್ರೀನಗರದ ಬಿಎಸ್ಎಫ್ ಕೇಂದ್ರ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಒಳನುಸುಳುವ ಪ್ರಕರಣ ಕಡಿಮೆಯಾಗಿದ್ದು, ಸದ್ಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಯುದ್ಧಕ್ಕೂ ಪರಿಸ್ಥಿತಿ ಶಾಂತಿಯುತವಾಗಿದೆ. ‘2021ರಲ್ಲಿ 58 ಒಳನುಸುಳುವ ಯತ್ನ ನಡೆದಿದ್ದು, ಐವರನ್ನು ಹತ್ಯೆ ಮಾಡಲಾಗಿದೆ. 21 ಉಗ್ರರು ವಾಪಸ್ ತೆರಳಿದ್ದು, ಒಬ್ಬನನ್ನು ಸೆರೆ ಹಿಡಿಯಲಾಗಿದೆ’ ಎಂದು ಮಾಹಿತಿ ನೀಡಿದರು.