<p><strong>ಶ್ರೀನಗರ: </strong>11 ಗಂಟೆಯಲ್ಲಿ 180 ಕಿ.ಮೀ ಓಡುವ ಮೂಲಕ ಬಿಎಸ್ಎಫ್ ಯೋಧರು 1971ರ ಯುದ್ಧದ ವೀರ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಓಟದಲ್ಲಿ ಬಿಎಸ್ಎಫ್ನ ಪುರುಷ ಮತ್ತು ಮಹಿಳಾ ಯೋಧರು ಸೇರಿ 930 ಮಂದಿ ಭಾಗವಹಿಸಿದ್ದರು. ಡಿಸೆಂಬರ್ 13ರ ಮಧ್ಯರಾತ್ರಿ ಈ ಓಟ ನಡೆದಿದೆ.</p>.<p>ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಬೇರ್ಪಡಿಸಿದ 1971ರ ಯುದ್ಧದ ಗೆಲುವಿನ ನೆನಪಿಗಾಗಿ ಪ್ರತಿ ವರ್ಷ ಡಿ.16ರಂದು ವಿಜಯ್ ದಿವಸ್ ಆಚರಣೆ ಮಾಡಲಾಗುತ್ತದೆ. ಅಂದು ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆಯು ಅತ್ಯಂತ ವೇಗದ ಮತ್ತು ಚಿಕ್ಕ ಸಮಯದಾಗಿದ್ದು, ಡಿಸೆಂಬರ್ 3ರಂದು ಆರಂಭವಾಗಿದ್ದ ಯುದ್ಧ ಡಿಸೆಂಬರ್ 16ಕ್ಕೆ ಕೊನೆಗೊಂಡಿತ್ತು. ಯುದ್ಧದಲ್ಲಿ ಸೋತ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಮಿರ್ ಅಬ್ದುಲ್ಲಾ ಖಾನ್ ನಿಯಾಜಿ 93,000 ಸೇನೆಯ ಜೊತೆ ಭಾರತಕ್ಕೆ ಶರಣಾಗಿದ್ದರು.2ನೇ ಮಹಾಯುದ್ಧದ ನಂತರದ ಅತಿ ದೊಡ್ಡ ಸೇನಾ ಶರಣಾಗತಿಯಾಗಿದೆ.</p>.<p>ಈ ವಿಜಯದ ನೆನಪಿಗಾಗಿ ನಡೆದ ಓಟದ ವಿಡಿಯೋವನ್ನು ಹಂಚಿಕೊಂಡಿರುವ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು. ಭಾರತದ ವಿಜಯವನ್ನು ಮೆಲುಕು ಹಾಕಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>11 ಗಂಟೆಯಲ್ಲಿ 180 ಕಿ.ಮೀ ಓಡುವ ಮೂಲಕ ಬಿಎಸ್ಎಫ್ ಯೋಧರು 1971ರ ಯುದ್ಧದ ವೀರ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಓಟದಲ್ಲಿ ಬಿಎಸ್ಎಫ್ನ ಪುರುಷ ಮತ್ತು ಮಹಿಳಾ ಯೋಧರು ಸೇರಿ 930 ಮಂದಿ ಭಾಗವಹಿಸಿದ್ದರು. ಡಿಸೆಂಬರ್ 13ರ ಮಧ್ಯರಾತ್ರಿ ಈ ಓಟ ನಡೆದಿದೆ.</p>.<p>ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಬೇರ್ಪಡಿಸಿದ 1971ರ ಯುದ್ಧದ ಗೆಲುವಿನ ನೆನಪಿಗಾಗಿ ಪ್ರತಿ ವರ್ಷ ಡಿ.16ರಂದು ವಿಜಯ್ ದಿವಸ್ ಆಚರಣೆ ಮಾಡಲಾಗುತ್ತದೆ. ಅಂದು ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆಯು ಅತ್ಯಂತ ವೇಗದ ಮತ್ತು ಚಿಕ್ಕ ಸಮಯದಾಗಿದ್ದು, ಡಿಸೆಂಬರ್ 3ರಂದು ಆರಂಭವಾಗಿದ್ದ ಯುದ್ಧ ಡಿಸೆಂಬರ್ 16ಕ್ಕೆ ಕೊನೆಗೊಂಡಿತ್ತು. ಯುದ್ಧದಲ್ಲಿ ಸೋತ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಮಿರ್ ಅಬ್ದುಲ್ಲಾ ಖಾನ್ ನಿಯಾಜಿ 93,000 ಸೇನೆಯ ಜೊತೆ ಭಾರತಕ್ಕೆ ಶರಣಾಗಿದ್ದರು.2ನೇ ಮಹಾಯುದ್ಧದ ನಂತರದ ಅತಿ ದೊಡ್ಡ ಸೇನಾ ಶರಣಾಗತಿಯಾಗಿದೆ.</p>.<p>ಈ ವಿಜಯದ ನೆನಪಿಗಾಗಿ ನಡೆದ ಓಟದ ವಿಡಿಯೋವನ್ನು ಹಂಚಿಕೊಂಡಿರುವ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು. ಭಾರತದ ವಿಜಯವನ್ನು ಮೆಲುಕು ಹಾಕಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>