ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಬೇರ್ಪಡಿಸಿದ 1971ರ ಯುದ್ಧದ ಗೆಲುವಿನ ನೆನಪಿಗಾಗಿ ಪ್ರತಿ ವರ್ಷ ಡಿ.16ರಂದು ವಿಜಯ್ ದಿವಸ್ ಆಚರಣೆ ಮಾಡಲಾಗುತ್ತದೆ. ಅಂದು ಭಾರತ ನಡೆಸಿದ ಮಿಲಿಟರಿ ಕಾರ್ಯಾಚರಣೆಯು ಅತ್ಯಂತ ವೇಗದ ಮತ್ತು ಚಿಕ್ಕ ಸಮಯದಾಗಿದ್ದು, ಡಿಸೆಂಬರ್ 3ರಂದು ಆರಂಭವಾಗಿದ್ದ ಯುದ್ಧ ಡಿಸೆಂಬರ್ 16ಕ್ಕೆ ಕೊನೆಗೊಂಡಿತ್ತು. ಯುದ್ಧದಲ್ಲಿ ಸೋತ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಮಿರ್ ಅಬ್ದುಲ್ಲಾ ಖಾನ್ ನಿಯಾಜಿ 93,000 ಸೇನೆಯ ಜೊತೆ ಭಾರತಕ್ಕೆ ಶರಣಾಗಿದ್ದರು.2ನೇ ಮಹಾಯುದ್ಧದ ನಂತರದ ಅತಿ ದೊಡ್ಡ ಸೇನಾ ಶರಣಾಗತಿಯಾಗಿದೆ.