<p class="title"><strong>ಲಖನೌ: </strong>‘ಬಿಜೆಪಿ ಮತ್ತು ಬಿಎಸ್ಪಿ ಸಿದ್ಧಾಂತ ಪರಸ್ಪರ ವಿರುದ್ಧವಾಗಿವೆ. ಬಿಜೆಪಿ ಜೊತೆಗೆ ತಮ್ಮ ಪಕ್ಷ ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.</p>.<p>ಕೋಮುವಾದಿ ಪಕ್ಷದ ಜೊತೆಗೆ ಮೈತ್ರಿ ಬದಲಾಗಿ ನಿವೃತ್ತಿ ಹೊಂದಲು ಬಯಸುತ್ತೇನೆ. ಕೋಮುವಾದಿ, ಜಾತೀಯವಾದಿ ಪಕ್ಷಗಳು ಮತ್ತು ಬಂಡವಾಳಶಾಹಿ ಪಡೆಗಳ ವಿರುದ್ಧ ಎಲ್ಲ ರೀತಿಯಲ್ಲಿ ಹೋರಾಡಲಿದ್ದೇನೆ ಎಂದರು.</p>.<p>‘ಇತ್ತೀಚೆೆಗೆ ತಾವು ನೀಡಿದ್ದ ಹೇಳಿಕೆಯನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಮುಸಲ್ಮಾನರು ಪಕ್ಷದಿಂದ ದೂರ ಉಳಿಯಬೇಕು ಎಂಬುದು ಆ ಪಕ್ಷಗಳ ಉದ್ದೇಶವಾಗಿದೆ’ ಎಂದು ಟೀಕಿಸಿದರು.</p>.<p>ಭವಿಷ್ಯದಲ್ಲಿ ಯಾವುದೇ ಚುನಾವಣೆಯಲ್ಲಿಯೂ ಬಿಜೆಪಿ ಮತ್ತು ಬಿಎಸ್ಪಿ ಮೈತ್ರಿ ಸಾಧ್ಯವಿಲ್ಲ. ಕೋಮುವಾದಿ ಪಕ್ಷದ ಜೊತೆಗೂಡಿ ಬಿಎಸ್ಪಿ ಸ್ಪರ್ಧೆ ನಡೆಸುವುದಿಲ್ಲ ಎಂದು ಅವರು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಮುಂದಿನ ಮೇಲ್ಮನೆ ಚುನಾವಣೆಯಲ್ಲಿ ತಮ್ಮ ಪಕ್ಷವು ಸಮಾಜವಾದಿ ಪಕ್ಷ ಬೆಂಬಲಿಸುವ ಅಭ್ಯರ್ಥಿಯ ಸೋಲಾಗುವಂತೆ ಎಲ್ಲ ಯತ್ನ ನಡೆಸಲಿದೆ ಎಂದು ಹೇಳಿದರು</p>.<p>ಎಸ್ಪಿ ಅಭ್ಯರ್ಥಿ ಸೋಲಿಸುವ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯೂ ಸೇರಿದಂತೆ ಯಾವುದೇ ಪ್ರಬಲ ಅಭ್ಯರ್ಥಿಯನ್ನು ತಮ್ಮಪಕ್ಷ ಬೆಂಬಲಿಸಲಿದೆ ಎಂದು ಅವರು ಪುನರುಚ್ಚರಿಸಿರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ: </strong>‘ಬಿಜೆಪಿ ಮತ್ತು ಬಿಎಸ್ಪಿ ಸಿದ್ಧಾಂತ ಪರಸ್ಪರ ವಿರುದ್ಧವಾಗಿವೆ. ಬಿಜೆಪಿ ಜೊತೆಗೆ ತಮ್ಮ ಪಕ್ಷ ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.</p>.<p>ಕೋಮುವಾದಿ ಪಕ್ಷದ ಜೊತೆಗೆ ಮೈತ್ರಿ ಬದಲಾಗಿ ನಿವೃತ್ತಿ ಹೊಂದಲು ಬಯಸುತ್ತೇನೆ. ಕೋಮುವಾದಿ, ಜಾತೀಯವಾದಿ ಪಕ್ಷಗಳು ಮತ್ತು ಬಂಡವಾಳಶಾಹಿ ಪಡೆಗಳ ವಿರುದ್ಧ ಎಲ್ಲ ರೀತಿಯಲ್ಲಿ ಹೋರಾಡಲಿದ್ದೇನೆ ಎಂದರು.</p>.<p>‘ಇತ್ತೀಚೆೆಗೆ ತಾವು ನೀಡಿದ್ದ ಹೇಳಿಕೆಯನ್ನು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಮುಸಲ್ಮಾನರು ಪಕ್ಷದಿಂದ ದೂರ ಉಳಿಯಬೇಕು ಎಂಬುದು ಆ ಪಕ್ಷಗಳ ಉದ್ದೇಶವಾಗಿದೆ’ ಎಂದು ಟೀಕಿಸಿದರು.</p>.<p>ಭವಿಷ್ಯದಲ್ಲಿ ಯಾವುದೇ ಚುನಾವಣೆಯಲ್ಲಿಯೂ ಬಿಜೆಪಿ ಮತ್ತು ಬಿಎಸ್ಪಿ ಮೈತ್ರಿ ಸಾಧ್ಯವಿಲ್ಲ. ಕೋಮುವಾದಿ ಪಕ್ಷದ ಜೊತೆಗೂಡಿ ಬಿಎಸ್ಪಿ ಸ್ಪರ್ಧೆ ನಡೆಸುವುದಿಲ್ಲ ಎಂದು ಅವರು ಹೇಳಿದರು.</p>.<p>ಇದೇ ಸಂದರ್ಭದಲ್ಲಿ ಮುಂದಿನ ಮೇಲ್ಮನೆ ಚುನಾವಣೆಯಲ್ಲಿ ತಮ್ಮ ಪಕ್ಷವು ಸಮಾಜವಾದಿ ಪಕ್ಷ ಬೆಂಬಲಿಸುವ ಅಭ್ಯರ್ಥಿಯ ಸೋಲಾಗುವಂತೆ ಎಲ್ಲ ಯತ್ನ ನಡೆಸಲಿದೆ ಎಂದು ಹೇಳಿದರು</p>.<p>ಎಸ್ಪಿ ಅಭ್ಯರ್ಥಿ ಸೋಲಿಸುವ ನಿಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯೂ ಸೇರಿದಂತೆ ಯಾವುದೇ ಪ್ರಬಲ ಅಭ್ಯರ್ಥಿಯನ್ನು ತಮ್ಮಪಕ್ಷ ಬೆಂಬಲಿಸಲಿದೆ ಎಂದು ಅವರು ಪುನರುಚ್ಚರಿಸಿರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>