ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಗ್‌ರಾಜ್‌: ಪರಿಶಿಷ್ಟ ಕುಟುಂಬದ ಸದಸ್ಯರ ಹತ್ಯೆ– ಮಾಯಾವತಿ ಖಂಡನೆ

Last Updated 27 ನವೆಂಬರ್ 2021, 7:32 IST
ಅಕ್ಷರ ಗಾತ್ರ

ಲಖನೌ: ಪ್ರಯಾಗ್‌ರಾಜ್‌ ಜಿಲ್ಲೆಯಲ್ಲಿ ಪರಿಶಿಷ್ಟ ಕುಟುಂಬವೊಂದರ ನಾಲ್ವರನ್ನು ಹತ್ಯೆ ಮಾಡಿರುವುದನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಶನಿವಾರ ಖಂಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ಬಿಜೆಪಿ ನೇತೃತ್ವದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಈ ಘಟನೆಗೆ ಕಾರಣ’ ಎಂದು ಆರೋಪಿಸಿದ್ದಾರೆ.

‘ಪರಿಶಿಷ್ಟ ಕುಟುಂಬದ ನಾಲ್ವರನ್ನು ಹತ್ಯೆಗೈದಿರುವುದು ದುಃಖಕರ ಮತ್ತು ನಾಚಿಕೆಗೇಡಿನ ಸಂಗತಿ. ಕಾನೂನು–ಸುವ್ಯವಸ್ಥೆ ವಿಷಯದಲ್ಲಿ ಬಿಜೆಪಿ ಕೂಡ ಹಿಂದಿನ ಸಮಾಜವಾದಿ ನೇತೃತ್ವದ ಸರ್ಕಾರದ ಹಾದಿಯಲ್ಲಿಯೇ ಸಾಗುತ್ತಿರುವಂತೆ ಕಂಡುಬರುತ್ತಿದೆ’ ಎಂದು ಟೀಕಿಸಿದ್ದಾರೆ.

‘ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT