ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿ ಚುನಾವಣೆ: ಯಾವುದೇ ಮಾಫಿಯಾ ವ್ಯಕ್ತಿಗೆ ಬಿಎಸ್‌ಪಿ ಟಿಕೆಟ್‌ ಇಲ್ಲ- ಮಾಯಾವತಿ

Last Updated 10 ಸೆಪ್ಟೆಂಬರ್ 2021, 6:42 IST
ಅಕ್ಷರ ಗಾತ್ರ

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ವ್ಯಕ್ತಿಗೆ ಬಿಎಸ್‌ಪಿಯಿಂದ ಟಿಕೆಟ್‌ ಸಿಗದಂತೆ ನೋಡಿಕೊಳ್ಳಲಾಗುವುದು ಎಂದು ಮಾಜಿ ಸಿಎಂ ಮಾಯಾವತಿ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, 'ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಮಾಫಿಯಾ ಅಥವಾ ಬಲಿಷ್ಠ ವ್ಯಕ್ತಿಗೆ ಪಕ್ಷದ ಟಿಕೆಟ್ ಸಿಗದಂತೆ ನೋಡಿಕೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.

ಇದೇ ವೇಳೆ ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಭೀಮ್ ರಾಜ್‌ಭರ್ ಅವರನ್ನು ಮವು ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಸಲಾಗುವುದು ಎಂದು ಮಾಯಾವತಿ ಘೋಷಿಸಿದ್ದಾರೆ.

ಮವು ಕ್ಷೇತ್ರದಿಂದ ಬಿಎಸ್‌ಪಿ ಶಾಸಕರಾಗಿ ಮುಖ್ತಾರ್ ಅನ್ಸಾರಿ ಐದು ಬಾರಿ ಆಯ್ಕೆಯಾಗಿದ್ದಾರೆ. ಅವರ ವಿರುದ್ಧ ದರೋಡೆ, ಕೊಲೆಯಂತಹ 52 ಗಂಭೀರ ಪ್ರಕರಣಗಳು ದಾಖಲಾಗಿವೆ. ಅನ್ಸಾರಿ ಪ್ರಸ್ತುತ ಜೈಲುವಾಸದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT