ಆಜಂಗಡ: ಉತ್ತರಪ್ರದೇಶದ ಆಜಂಗಡ ಜಿಲ್ಲೆಯಲ್ಲಿ ಸ್ಥಳೀಯ ಬಿಎಸ್ಪಿ ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಸೋಮವಾರ ಸಂಜೆ ಕಲಾಮುದ್ದೀನ್ ಖಾನ್ (60) ತನ್ನ ಮನೆ ಮುಂದೆ ಕುಳಿತಿದ್ದ ವೇಳೆ ಬೈಕ್ನಲ್ಲಿ ಬಂದ ದಾಳಿಕೋರರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಕಲಾಮುದ್ದೀನ್ ಅವರನ್ನು ಮೊದಲು ಲಾಲ್ಗನಿಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ಅವರ ಪರಿಸ್ಥಿತಿ ಬಹಳ ಗಂಭೀರವಾಗಿದ್ದರಿಂದ ಖಾನ್ನನ್ನು ವಾರಾಣಸಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದರು.
‘ಈ ಘಟನೆ ಸಂಬಂಧ ಮಾಜಿ ಸರಪಂಚ್ ಸೇರಿದಂತೆ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದರಲ್ಲಿ ಮೂವರನ್ನು ಬಂಧಿಸಲಾಗಿದ್ದು, ಹಳೆಯ ದ್ವೇಷದ ಕಾರಣ ಕಲಾಮುದ್ದೀನ್ನನ್ನು ಕೊಲ್ಲಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ಸಿಂಗ್ ಅವರು ಹೇಳಿದರು.
‘ಕಲಾಮುದ್ದೀನ್ ಕೂಡ ಅಪರಾಧ ಹಿನ್ನೆಲೆಯನ್ನು ಹೊಂದಿದ್ದರು. ಖಾನ್ ವಿರುದ್ಧ ಎರಡು ಹತ್ಯೆ ಪ್ರಕರಣಗಳು ಸೇರಿ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದವು. ಆರೋಪಿಗಳನ್ನು ಹುಡುಕಲು ನಾಲ್ಕು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ’ ಎಂದು ಅವರು ತಿಳಿಸಿದರು.