<p><strong>ಲಖನೌ(ಉತ್ತರಪ್ರದೇಶ):</strong>ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆಮಾಯಾವತಿಅವರು ಎನ್ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನಕರ್ಗೆ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಿದ್ದಾರೆ.</p>.<p>ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರುಸಾರ್ವಜನಿಕ ಹಿತಾಸಕ್ತಿ ಮತ್ತು ತಮ್ಮ ಪಕ್ಷದ ಹೋರಾಟದ ದೃಷ್ಟಿಯಿಂದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರಿಗೆ ಬೆಂಬಲ ನೀಡಲು ನಮ್ಮ ಪಕ್ಷ ನಿರ್ಧಾರ ಮಾಡಿದೆ. ಈ ಬಗ್ಗೆ ನಾನು ಇಂದು ಔಪಚಾರಿಕವಾಗಿ ಘೋಷಣೆ ಮಾಡುತ್ತೀದ್ದೇನೆ ಎಂದು ಟ್ವೀಟ್ಮಾಡಿದ್ದಾರೆ.</p>.<p>ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇದೇ ಆಗಸ್ಟ್ 10 ರಂದು ಕೊನೆಯಾಗಲಿದೆ.</p>.<p>ಬಿಜೆಪಿ ನೇತೃತ್ವದಎನ್ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಕಣಕ್ಕೆ ಇಳಿಸಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ರಾಜ್ಯದ ಮಾರ್ಗರೇಟ್ ಆಳ್ವ ಅವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಣೆ ಮಾಡಿವೆ.</p>.<p>ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್ ಧನಕರ್ 1989ರಲ್ಲಿ ರಾಜಕೀಯ ಪ್ರವೇಶಿಸಿದರು. ಅವರು ಜುಲೈ 2019ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು.</p>.<p>ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿರುವ ಭಾರತದ ಉಪರಾಷ್ಟ್ರಪತಿಯನ್ನು ವಿಧಾನಸಭೆ, ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರು ಆಯ್ಕೆ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ(ಉತ್ತರಪ್ರದೇಶ):</strong>ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆಮಾಯಾವತಿಅವರು ಎನ್ಡಿಎಯ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನಕರ್ಗೆ ತಮ್ಮ ಪಕ್ಷದ ಬೆಂಬಲವನ್ನು ಘೋಷಿಸಿದ್ದಾರೆ.</p>.<p>ಈ ಬಗ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರುಸಾರ್ವಜನಿಕ ಹಿತಾಸಕ್ತಿ ಮತ್ತು ತಮ್ಮ ಪಕ್ಷದ ಹೋರಾಟದ ದೃಷ್ಟಿಯಿಂದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರಿಗೆ ಬೆಂಬಲ ನೀಡಲು ನಮ್ಮ ಪಕ್ಷ ನಿರ್ಧಾರ ಮಾಡಿದೆ. ಈ ಬಗ್ಗೆ ನಾನು ಇಂದು ಔಪಚಾರಿಕವಾಗಿ ಘೋಷಣೆ ಮಾಡುತ್ತೀದ್ದೇನೆ ಎಂದು ಟ್ವೀಟ್ಮಾಡಿದ್ದಾರೆ.</p>.<p>ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇದೇ ಆಗಸ್ಟ್ 10 ರಂದು ಕೊನೆಯಾಗಲಿದೆ.</p>.<p>ಬಿಜೆಪಿ ನೇತೃತ್ವದಎನ್ಡಿಎ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಕಣಕ್ಕೆ ಇಳಿಸಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ರಾಜ್ಯದ ಮಾರ್ಗರೇಟ್ ಆಳ್ವ ಅವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಣೆ ಮಾಡಿವೆ.</p>.<p>ವೃತ್ತಿಯಲ್ಲಿ ವಕೀಲರಾಗಿರುವ ಜಗದೀಪ್ ಧನಕರ್ 1989ರಲ್ಲಿ ರಾಜಕೀಯ ಪ್ರವೇಶಿಸಿದರು. ಅವರು ಜುಲೈ 2019ರಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು.</p>.<p>ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿರುವ ಭಾರತದ ಉಪರಾಷ್ಟ್ರಪತಿಯನ್ನು ವಿಧಾನಸಭೆ, ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರು ಆಯ್ಕೆ ಮಾಡುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>