<p class="title"><strong>ಬದೌನ್ (ಉತ್ತರ ಪ್ರದೇಶ):</strong> ಬೆಳೆ ಹಾಳು ಮಾಡಿದ್ದ ವ್ಯಕ್ತಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿ ಉತ್ರರಪ್ರದೇಶದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಕಚೇರಿ ಎದುರೇ ಬೆಂಕಿ ಹಚ್ಚಿಕೊಂಡಿದ್ದ ರೈತ ಮೃಪಟ್ಟಿದ್ದಾರೆ ಎಂದು ಅಧಿಕಾರಿಗಳುಗುರುವಾರ ತಿಳಿಸಿದ್ದಾರೆ.</p>.<p class="title">ಕೃಷ್ಣಪಾಲ್ ಮೃತ ರೈತ. ಬುಧವಾರ ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ ಕೃಷ್ಣಪಾಲ್ ಅವರನ್ನು ಬರೇಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಘಟನೆ ಬೆನ್ನಲ್ಲೇ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ, ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಎರಡು ವಾರಗಳ ಹಿಂದೆ ದುಷ್ಕರ್ಮಿಗಳು ಕಷ್ಣಪಾಲ್ ಅವರ ಹೊಲಕ್ಕೆ ಬೆಂಕಿ ಇಟ್ಟಿದ್ದರು. ಈ ಸಂಬಂಧ ಏ.25ರಂದು ಮಂಡಿ ಸಮಿತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಎಸ್ಎಸ್ಪಿಗೂ ಅರ್ಜಿ ನೀಡಲಾಗಿತ್ತು. ಆದರೆ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೇಸತ್ತು ಕೃಷ್ಣಪಾಲ್ ಬುಧವಾರ ಬೆಂಕಿ ಹಚ್ಚಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬದೌನ್ (ಉತ್ತರ ಪ್ರದೇಶ):</strong> ಬೆಳೆ ಹಾಳು ಮಾಡಿದ್ದ ವ್ಯಕ್ತಿಗಳ ವಿರುದ್ಧ ಪೊಲೀಸರು ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿ ಉತ್ರರಪ್ರದೇಶದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಕಚೇರಿ ಎದುರೇ ಬೆಂಕಿ ಹಚ್ಚಿಕೊಂಡಿದ್ದ ರೈತ ಮೃಪಟ್ಟಿದ್ದಾರೆ ಎಂದು ಅಧಿಕಾರಿಗಳುಗುರುವಾರ ತಿಳಿಸಿದ್ದಾರೆ.</p>.<p class="title">ಕೃಷ್ಣಪಾಲ್ ಮೃತ ರೈತ. ಬುಧವಾರ ಬೆಂಕಿ ಹಚ್ಚಿಕೊಂಡು ತೀವ್ರ ಗಾಯಗೊಂಡಿದ್ದ ಕೃಷ್ಣಪಾಲ್ ಅವರನ್ನು ಬರೇಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಘಟನೆ ಬೆನ್ನಲ್ಲೇ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ, ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಎರಡು ವಾರಗಳ ಹಿಂದೆ ದುಷ್ಕರ್ಮಿಗಳು ಕಷ್ಣಪಾಲ್ ಅವರ ಹೊಲಕ್ಕೆ ಬೆಂಕಿ ಇಟ್ಟಿದ್ದರು. ಈ ಸಂಬಂಧ ಏ.25ರಂದು ಮಂಡಿ ಸಮಿತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಎಸ್ಎಸ್ಪಿಗೂ ಅರ್ಜಿ ನೀಡಲಾಗಿತ್ತು. ಆದರೆ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೇಸತ್ತು ಕೃಷ್ಣಪಾಲ್ ಬುಧವಾರ ಬೆಂಕಿ ಹಚ್ಚಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>