ಬಡಗಾಮ್ ಗ್ರೆನೇಡ್ ದಾಳಿ: ಲಷ್ಕರ್ ಎ ತಯಬಾ ಉಗ್ರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಡಗಾಮ್ ಜಿಲ್ಲೆಯಲ್ಲಿ ಆಗಸ್ಟ್ 15ರಂದು ಅಲ್ಪಸಂಖ್ಯಾತರ ನೆಲೆಗಳ ಮೇಲೆ ನಡೆಸಲಾಗಿದ್ದ ಗ್ರೆನೇಡ್ ದಾಳಿಯ ಸಂಬಂಧ ಲಷ್ಕರ್ ಎ ತಯಬಾದ ಉಗ್ರನೊಬ್ಬನನ್ನು ಭದ್ರತಾ ಪಡೆಯವರು ಸೋಮವಾರ ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಡಿ ಬಂಧನಕ್ಕೊಳಗಾಗಿರುವವರ ಸಂಖ್ಯೆ ಮೂರಕ್ಕೆ ಏರಿದೆ.
‘ಸುಹೇಲ್ ಅಹ್ಮದ್ ಮಲಿಕ್ ಬಂಧಿತ. ಈತ ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿದ್ದ. ಬಂಧನದ ವೇಳೆ ಈತನ ಬಳಿ ಇದ್ದ ಗ್ರೆನೇಡ್ ಹಾಗೂ ಇತರ ಸ್ಫೋಟಕಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.