ಪ್ರಕರಣದ ತನಿಖೆಯು ನಿರ್ಣಾಯಕ ಹಂತದಲ್ಲಿದ್ದು ಆರೋಪಿಗಳ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಆದ್ದರಿಂದ ಆರೋಪಿಗಳಾದ ಶ್ವೇತಾ ಸಿಂಗ್ (18) ಮತ್ತು ರಾವಲ್ (21) ಅವರನ್ನು ಇನ್ನೂ ಸ್ವಲ್ಪ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದುಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ಗೆ ಪೊಲೀಸರು ಸೋಮವಾರ ಮನವಿ ಮಾಡಿದರು. ನ್ಯಾಯಾಲಯ ಇದನ್ನು ಮಾನ್ಯಮಾಡಿದೆ.