<p><strong>ನವದೆಹಲಿ: </strong>‘ಪ್ರತಿ ವರ್ಷ 70 ಲಕ್ಷ ಜನರು ಸುಟ್ಟಗಾಯಗಳಿಂದ ಬಳಲುತ್ತಿದ್ದರೂ, ದೇಶದಲ್ಲಿ ಅತ್ಯಾಧುನಿಕ ಚಿಕಿತ್ಸಾ ಕೇಂದ್ರಗಳ ಕೊರತೆಯಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಭಾನುವಾರ ಹೇಳಿದರು.</p>.<p>ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ(ಏಮ್ಸ್) ಸ್ಥಾಪಿಸಿರುವ ಬರ್ನ್ಸ್ ಮತ್ತು ಪ್ಲಾಸ್ಟಿಕ್ ಸರ್ಜರಿ ಬ್ಲಾಕ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸುಟ್ಟ ಗಾಯಗಳಿಂದ ಪ್ರತಿ ವರ್ಷ 1.4 ಲಕ್ಷ ಜನರು ಮೃತಪಡುತ್ತಿದ್ದಾರೆ. ಸುಟ್ಟ ಗಾಯವು ಉದ್ಯೋಗಿಗಳ ನಷ್ಟಕ್ಕೆ ಬಹುದೊಡ್ಡ ಕಾರಣವಾಗಿದೆ. ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಆರ್ಥಿಕತೆಯಲ್ಲಿ ಇದು ಕಳವಳಕಾರಿಯಾದ ಅಂಶವಾಗಿದೆ. ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಗುಣಮಟ್ಟದ ಚಿಕಿತ್ಸಾ ಕೇಂದ್ರದ ಅಗತ್ಯವಿದೆ’ ಎಂದರು.</p>.<p>‘ಸುಟ್ಟಗಾಯಗಳ ಚಿಕಿತ್ಸೆ ಮತ್ತು ಸಂಶೋಧನಾ ಕ್ಷೇತ್ರದ ಬೆಳವಣಿಗಾಗಿ ಏಮ್ಸ್ನಲ್ಲಿ ಈ ಚಿಕಿತ್ಸಾ ಕೇಂದ್ರ ಪ್ರಾರಂಭಿಸಲಾಗಿದೆ. ಸರ್ಕಾರದ ಈ ಕ್ರಮವು ಜನರ ಅಗತ್ಯ ಮತ್ತು ಲಭ್ಯತೆಯ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಪ್ರತಿ ವರ್ಷ 70 ಲಕ್ಷ ಜನರು ಸುಟ್ಟಗಾಯಗಳಿಂದ ಬಳಲುತ್ತಿದ್ದರೂ, ದೇಶದಲ್ಲಿ ಅತ್ಯಾಧುನಿಕ ಚಿಕಿತ್ಸಾ ಕೇಂದ್ರಗಳ ಕೊರತೆಯಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಭಾನುವಾರ ಹೇಳಿದರು.</p>.<p>ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ(ಏಮ್ಸ್) ಸ್ಥಾಪಿಸಿರುವ ಬರ್ನ್ಸ್ ಮತ್ತು ಪ್ಲಾಸ್ಟಿಕ್ ಸರ್ಜರಿ ಬ್ಲಾಕ್ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸುಟ್ಟ ಗಾಯಗಳಿಂದ ಪ್ರತಿ ವರ್ಷ 1.4 ಲಕ್ಷ ಜನರು ಮೃತಪಡುತ್ತಿದ್ದಾರೆ. ಸುಟ್ಟ ಗಾಯವು ಉದ್ಯೋಗಿಗಳ ನಷ್ಟಕ್ಕೆ ಬಹುದೊಡ್ಡ ಕಾರಣವಾಗಿದೆ. ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಆರ್ಥಿಕತೆಯಲ್ಲಿ ಇದು ಕಳವಳಕಾರಿಯಾದ ಅಂಶವಾಗಿದೆ. ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಗುಣಮಟ್ಟದ ಚಿಕಿತ್ಸಾ ಕೇಂದ್ರದ ಅಗತ್ಯವಿದೆ’ ಎಂದರು.</p>.<p>‘ಸುಟ್ಟಗಾಯಗಳ ಚಿಕಿತ್ಸೆ ಮತ್ತು ಸಂಶೋಧನಾ ಕ್ಷೇತ್ರದ ಬೆಳವಣಿಗಾಗಿ ಏಮ್ಸ್ನಲ್ಲಿ ಈ ಚಿಕಿತ್ಸಾ ಕೇಂದ್ರ ಪ್ರಾರಂಭಿಸಲಾಗಿದೆ. ಸರ್ಕಾರದ ಈ ಕ್ರಮವು ಜನರ ಅಗತ್ಯ ಮತ್ತು ಲಭ್ಯತೆಯ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>