<p><strong>ಲೂಧಿಯಾನ</strong>: ಪಂಜಾಬ್ನ ವರ್ತಕರ ಸಂಘಟನೆಯು ಹೊಸ ರಾಜಕೀಯ ಪಕ್ಷವೊಂದನ್ನು ರಚಿಸಿದ್ದು, ಭಾರತೀಯ ಕಿಸಾನ್ ಯೂನಿಯನ್ (ಚದೂನಿ) ಮುಖ್ಯಸ್ಥ ಗುರ್ನಾಮ್ ಸಿಂಗ್ ಚದೂನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.</p>.<p>ನೂತನ ಪಕ್ಷಕ್ಕೆ ‘ಭಾರತೀಯ ಆರ್ಥಿಕ ಪಾರ್ಟಿ’ ಎಂದು ಹೆಸರಿಡಲಾಗಿದ್ದು, ರೈತರು, ವರ್ತಕರು ಹಾಗೂ ಕಾರ್ಮಿಕರ ಧ್ವನಿಯಾಗಲಿದೆ ಎಂದು ಪಕ್ಷದ ಸಂಸ್ಥಾಪಕರು ಹೇಳಿದ್ದಾರೆ.</p>.<p>ವರ್ತಕರ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಚದೂನಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ವರ್ತಕರ ಸಂಘದ ಅಧ್ಯಕ್ಷ ತರುಣ್ ಬಾವಾ ಅವರನ್ನು ನೂತನ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಿಸಲಾಯಿತು.</p>.<p>ಚದೂನಿಯವರು ನೂತನ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ. ಆದರೆ, ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಸಭೆಯಲ್ಲಿ ಅವರು ಉಪಸ್ಥಿತರಿದ್ದರು.</p>.<p>ಮುಂದಿನ ವರ್ಷ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಇನ್ನೊಂದೆಡೆ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ, ನೂತನ ಪಕ್ಷವೊಂದು ಅಸ್ತಿತ್ವಕ್ಕೆ ಬಂದಿರುವುದಕ್ಕೆ ಮಹತ್ವ ಬಂದಿದೆ.</p>.<p>ಸಭೆ ನಂತರ ಮಾತನಾಡಿದ ಚದೂನಿ, ‘ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಎಲ್ಲ 117 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಲಾಗಿದೆ’ ಎಂದರು.</p>.<p>‘ವರ್ತಕರು, ರೈತರು ಹಾಗೂ ಕಾರ್ಮಿಕರನ್ನು ಈ ಹಿಂದಿನ ಕಾಂಗ್ರೆಸ್ ಹಾಗೂ ಬಿಜೆಪಿ ನೇತೃತ್ವ ಸರ್ಕಾರಗಳು ನಿರ್ಲಕ್ಷಿಸಿವೆ. ಇವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನೂತನ ಪಕ್ಷ ಶ್ರಮಿಸುವ ವಿಶ್ವಾಸವಿದೆ’ ಎಂದು ಹೇಳಿದರು.</p>.<p>‘ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳು ಒಟ್ಟಾಗಿ, ಚುನಾವಣೆ ಎದುರಿಸಬೇಕು’ ಎಂದು ಚದೂನಿ ಇತ್ತೀಚೆಗೆ ಹೇಳಿದ್ದರು.</p>.<p>‘ಮಿಷನ್ ಪಂಜಾಬ್’ ಎಂಬ ಪರಿಕಲ್ಪನೆ ಮುಂದಿಟ್ಟಿದ್ದ ಅವರು, ‘ಹೊಸ ರಾಜಕೀಯ ಪಕ್ಷದ ಮೂಲಕ ವ್ಯವಸ್ಥೆಯನ್ನು ಹೇಗೆ ಬದಲಾಯಿಸಬಹುದು ಎಂಬುದಕ್ಕೆ ಈ ಪರಿಕಲ್ಪನೆ ಮಾದರಿಯಾಗಲಿದೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೂಧಿಯಾನ</strong>: ಪಂಜಾಬ್ನ ವರ್ತಕರ ಸಂಘಟನೆಯು ಹೊಸ ರಾಜಕೀಯ ಪಕ್ಷವೊಂದನ್ನು ರಚಿಸಿದ್ದು, ಭಾರತೀಯ ಕಿಸಾನ್ ಯೂನಿಯನ್ (ಚದೂನಿ) ಮುಖ್ಯಸ್ಥ ಗುರ್ನಾಮ್ ಸಿಂಗ್ ಚದೂನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.</p>.<p>ನೂತನ ಪಕ್ಷಕ್ಕೆ ‘ಭಾರತೀಯ ಆರ್ಥಿಕ ಪಾರ್ಟಿ’ ಎಂದು ಹೆಸರಿಡಲಾಗಿದ್ದು, ರೈತರು, ವರ್ತಕರು ಹಾಗೂ ಕಾರ್ಮಿಕರ ಧ್ವನಿಯಾಗಲಿದೆ ಎಂದು ಪಕ್ಷದ ಸಂಸ್ಥಾಪಕರು ಹೇಳಿದ್ದಾರೆ.</p>.<p>ವರ್ತಕರ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಸಭೆ ಚದೂನಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು. ವರ್ತಕರ ಸಂಘದ ಅಧ್ಯಕ್ಷ ತರುಣ್ ಬಾವಾ ಅವರನ್ನು ನೂತನ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಿಸಲಾಯಿತು.</p>.<p>ಚದೂನಿಯವರು ನೂತನ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿಲ್ಲ. ಆದರೆ, ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಸಭೆಯಲ್ಲಿ ಅವರು ಉಪಸ್ಥಿತರಿದ್ದರು.</p>.<p>ಮುಂದಿನ ವರ್ಷ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಇನ್ನೊಂದೆಡೆ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ, ನೂತನ ಪಕ್ಷವೊಂದು ಅಸ್ತಿತ್ವಕ್ಕೆ ಬಂದಿರುವುದಕ್ಕೆ ಮಹತ್ವ ಬಂದಿದೆ.</p>.<p>ಸಭೆ ನಂತರ ಮಾತನಾಡಿದ ಚದೂನಿ, ‘ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಎಲ್ಲ 117 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಲಾಗಿದೆ’ ಎಂದರು.</p>.<p>‘ವರ್ತಕರು, ರೈತರು ಹಾಗೂ ಕಾರ್ಮಿಕರನ್ನು ಈ ಹಿಂದಿನ ಕಾಂಗ್ರೆಸ್ ಹಾಗೂ ಬಿಜೆಪಿ ನೇತೃತ್ವ ಸರ್ಕಾರಗಳು ನಿರ್ಲಕ್ಷಿಸಿವೆ. ಇವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನೂತನ ಪಕ್ಷ ಶ್ರಮಿಸುವ ವಿಶ್ವಾಸವಿದೆ’ ಎಂದು ಹೇಳಿದರು.</p>.<p>‘ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿವಿಧ ಸಂಘಟನೆಗಳು ಒಟ್ಟಾಗಿ, ಚುನಾವಣೆ ಎದುರಿಸಬೇಕು’ ಎಂದು ಚದೂನಿ ಇತ್ತೀಚೆಗೆ ಹೇಳಿದ್ದರು.</p>.<p>‘ಮಿಷನ್ ಪಂಜಾಬ್’ ಎಂಬ ಪರಿಕಲ್ಪನೆ ಮುಂದಿಟ್ಟಿದ್ದ ಅವರು, ‘ಹೊಸ ರಾಜಕೀಯ ಪಕ್ಷದ ಮೂಲಕ ವ್ಯವಸ್ಥೆಯನ್ನು ಹೇಗೆ ಬದಲಾಯಿಸಬಹುದು ಎಂಬುದಕ್ಕೆ ಈ ಪರಿಕಲ್ಪನೆ ಮಾದರಿಯಾಗಲಿದೆ’ ಎಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>