ನವದೆಹಲಿ: ಉಪಸಭಾಪತಿಯಾಗಿದ್ದ ಎಸ್.ಎಲ್. ಧರ್ಮೇಗೌಡ ಅವರ ಸಾವಿನಿಂದ ತೆರವಾಗಿರುವ ರಾಜ್ಯ ವಿಧಾನ ಪರಿಷತ್ನ ಒಂದು ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.
ವಿಧಾನಸಭೆ ಸದಸ್ಯರಿಂದ ಈ ಸ್ಥಾನದ ಆಯ್ಕೆ ನಡೆಯಲಿದ್ದು, ಮಾರ್ಚ್ 15ರಂದು ಮತದಾನ ನಿಗದಿಪಡಿಸಲಾಗಿದೆ.
ಫೆಬ್ರುವರಿ 25ರಂದು ಈ ಸಂಬಂಧ ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 4 ಕೊನೆಯ ದಿನವಾಗಿದ್ದು, 5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಿಂದಕ್ಕೆ ಪಡೆಯಲು ಮಾರ್ಚ್ 8 ಕೊನೆಯ ದಿನವಾಗಿದೆ.
ಮತದಾನವು 15ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 4ರವರೆಗೆ ನಡೆಯಲಿದ್ದು, ಸಂಜೆ 5ಕ್ಕೆ ಮತ ಎಣಿಕೆ ಕಾರ್ಯ ನಿಗದಿಯಾಗಿದೆ.
ಉಪ ಸಭಾಪತಿಯಾಗಿದ್ದ ಜೆಡಿಎಸ್ನ ಎಸ್.ಎಲ್. ಧರ್ಮೇಗೌಡ ಅವರು ಡಿಸೆಂಬರ್ 28ರಂದು ಕಡೂರು ಬಳಿ ರೈಲ್ವೆ ಟ್ರ್ಯಾಕ್ ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದರು.