ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ: ಬಿಜೆಪಿ ಟಿಕೆಟ್‌ ಘೋಷಣೆ, ಮಂಗಲಾ ಅಂಗಡಿ ಬೆಳಗಾವಿ ಅಭ್ಯರ್ಥಿ

ತಿರುಪತಿಯಿಂದ ನಿವೃತ್ತ ಅಧಿಕಾರಿ ರತ್ನಪ್ರಭಾ
Last Updated 25 ಮಾರ್ಚ್ 2021, 16:40 IST
ಅಕ್ಷರ ಗಾತ್ರ

ನವದೆಹಲಿ: ದಿವಂಗತ ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅವರಿಗೆ ಬೆಳಗಾವಿ ಲೋಕಸಭೆ ಚುನಾವಣೆಯ ಬಿಜೆಪಿ ಟಿಕೆಟ್‌ ಘೋಷಣೆಯಾಗಿದೆ.

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಕೋವಿಡ್‌–19ರಿಂದ ನವದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರ ತೆರವಾಗಿತ್ತು.

ಸಾಕಷ್ಟು ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದರೂ ಅಂಗಡಿ ಅವರ ಕುಟುಂಬ ಸದಸ್ಯರಿಗೇ ಪಕ್ಷ ಆದ್ಯತೆ ನೀಡಿದೆ.

ಮಂಗಲಾ ಸುರೇಶ್‌ ಅಂಗಡಿ
ಮಂಗಲಾ ಸುರೇಶ್‌ ಅಂಗಡಿ

ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತ ಶರಣು ಸಲಗರ ಅವರಿಗೆ ಅದೃಷ್ಟ ಒಲಿದಿದ್ದು, ಮಸ್ಕಿ ಕ್ಷೇತ್ರದಲ್ಲಿ ನಿರೀಕ್ಷೆಯಂತೆಯೇ ಪ್ರತಾಪಗೌಡ ಪಾಟೀಲ ಅವರನ್ನೇ ಪಕ್ಷ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಶರಣು ಸಲಗರ
ಶರಣು ಸಲಗರ

ರತ್ನಪ್ರಭಾ ಕಣಕ್ಕೆ: ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಚುನಾವಣೆಯ ಅಭ್ಯರ್ಥಿಯನ್ನಾಗಿ ಬಿಜೆಪಿಯ ಘೋಷಿಸಿದೆ.

ಐಎಎಸ್‌ನ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ರತ್ನಪ್ರಭಾ, ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT