ನವದೆಹಲಿ: ಮೂರು ಲೋಕಸಭಾ ಕ್ಷೇತ್ರ ಮತ್ತು ವಿವಿಧ ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ಜೂನ್ 23ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಉತ್ತರ ಪ್ರದೇಶದ ಅಜಂಗಢಮತ್ತು ರಾಂಪುರದಲ್ಲಿ ಕ್ರಮವಾಗಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಮೊಹಮ್ಮದ್ ಅಜಂ ಖಾನ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಲೋಕಸಭಾ ಸ್ಥಾನ ಮತ್ತು ಪಂಜಾಬ್ನಲ್ಲಿ ಭಗವಂತ ಮಾನ್ ಅವರು ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಉಳಿದಂತೆ ಜಾರ್ಖಂಡ್, ಆಂಧ್ರ ಪ್ರದೇಶ, ಅಗರ್ತಲಾ, ತ್ರಿಪುರಾಗಳಲ್ಲಿ ತೆರವಾಗಿರುವ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಜೂನ್ 26ರಂದು ಮತ ಎಣಿಕೆ ನಡೆಯುತ್ತದೆ ಎಂದು ಆಯೋಗ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.