<p><strong>ಸಿಲಿಗುರಿ: </strong>ಕೋವಿಡ್-19 ಕಾರಣದಿಂದಾಗಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೊಳಿಸುವುದು ವಿಳಂಬವಾಗಿದ್ದು, ಶೀಘ್ರದಲ್ಲೇ ಈ ಕಾನೂನು ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ತಿಳಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಿಎಎ ಅನುಷ್ಠಾನಕ್ಕೆ ಪಕ್ಷವು ಬದ್ಧವಾಗಿದ್ದು, ಎಲ್ಲರಿಗೂ ಇದರ ಲಾಭ ದೊರಕಲಿದೆ ಎಂದು ತಿಳಿಸಿದ್ದಾರೆ.</p>.<p>2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲು ಸಿಲಿಗುರಿಗೆ ಭೇಟಿ ನೀಡಿದ್ದ ನಡ್ಡಾ, ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದರು.<br />ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ, ತನ್ನ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ರಾಜ್ಯದಲ್ಲಿ 'ಒಡೆದು ಆಳುವ ನೀತಿಯನ್ನು' ಅನುಸರಿಸುತ್ತಿದೆ. ಆದರೆ ಬಿಜೆಪಿ ಮಾತ್ರ ಎಲ್ಲರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ ಎಂದರು.</p>.<p>ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ರೂಪಿಸಲು ಇನ್ನೂ ಮೂರು ತಿಂಗಳುಗಳು ಬೇಕಾಗುತ್ತವೆ ಎಂದು ಗೃಹ ಸಚಿವಾಲಯವು ಆಗಸ್ಟ್ನಲ್ಲಿ ಸಂಸದೀಯ ಸ್ಥಾಯಿ ಸಮಿತಿಗೆ ತಿಳಿಸಿತ್ತು. ಸಂಸತ್ತು ಅಂಗೀಕರಿಸಿದ ನಂತರ ಅಧಿಸೂಚನೆ ಹೊರಡಿಸಿದರೂ, ನಿಯಮಗಳ ಕೊರತೆಯಿಂದಾಗಿ ಸಿಎಎ ಅನುಷ್ಠಾನವನ್ನು ತಡೆಹಿಡಿಯಲಾಗಿದೆ.</p>.<p>ಕಳೆದ ವರ್ಷ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ, 2014ರ ಡಿಸೆಂಬರ್ 14ಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಬಂದಿರುವ ಮುಸ್ಲಿಮೇತರ ಹಿಂದೂ, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧ, ಜೈನರು ಮತ್ತು ಪಾರ್ಸಿಗಳಿಗೆ ಭಾರತದ ಪೌರತ್ವ ಒದಗಿಸುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಲಿಗುರಿ: </strong>ಕೋವಿಡ್-19 ಕಾರಣದಿಂದಾಗಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೊಳಿಸುವುದು ವಿಳಂಬವಾಗಿದ್ದು, ಶೀಘ್ರದಲ್ಲೇ ಈ ಕಾನೂನು ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ತಿಳಿಸಿದ್ದಾರೆ.</p>.<p>ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಸಿಎಎ ಅನುಷ್ಠಾನಕ್ಕೆ ಪಕ್ಷವು ಬದ್ಧವಾಗಿದ್ದು, ಎಲ್ಲರಿಗೂ ಇದರ ಲಾಭ ದೊರಕಲಿದೆ ಎಂದು ತಿಳಿಸಿದ್ದಾರೆ.</p>.<p>2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲು ಸಿಲಿಗುರಿಗೆ ಭೇಟಿ ನೀಡಿದ್ದ ನಡ್ಡಾ, ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದರು.<br />ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ, ತನ್ನ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ರಾಜ್ಯದಲ್ಲಿ 'ಒಡೆದು ಆಳುವ ನೀತಿಯನ್ನು' ಅನುಸರಿಸುತ್ತಿದೆ. ಆದರೆ ಬಿಜೆಪಿ ಮಾತ್ರ ಎಲ್ಲರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ ಎಂದರು.</p>.<p>ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ರೂಪಿಸಲು ಇನ್ನೂ ಮೂರು ತಿಂಗಳುಗಳು ಬೇಕಾಗುತ್ತವೆ ಎಂದು ಗೃಹ ಸಚಿವಾಲಯವು ಆಗಸ್ಟ್ನಲ್ಲಿ ಸಂಸದೀಯ ಸ್ಥಾಯಿ ಸಮಿತಿಗೆ ತಿಳಿಸಿತ್ತು. ಸಂಸತ್ತು ಅಂಗೀಕರಿಸಿದ ನಂತರ ಅಧಿಸೂಚನೆ ಹೊರಡಿಸಿದರೂ, ನಿಯಮಗಳ ಕೊರತೆಯಿಂದಾಗಿ ಸಿಎಎ ಅನುಷ್ಠಾನವನ್ನು ತಡೆಹಿಡಿಯಲಾಗಿದೆ.</p>.<p>ಕಳೆದ ವರ್ಷ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ, 2014ರ ಡಿಸೆಂಬರ್ 14ಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಬಂದಿರುವ ಮುಸ್ಲಿಮೇತರ ಹಿಂದೂ, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧ, ಜೈನರು ಮತ್ತು ಪಾರ್ಸಿಗಳಿಗೆ ಭಾರತದ ಪೌರತ್ವ ಒದಗಿಸುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>