ಆತ್ಮನಿರ್ಭರ್ ಭಾರತ್ ರೋಜ್ಗಾರ್ ಯೋಜನೆಗೆ ₹22,810 ಕೋಟಿ: ಸಂಪುಟ ಅನುಮೋದನೆ

ನವದೆಹಲಿ: ಉದ್ಯಮ ಚಟುವಟಿಕೆಗೆ ಉತ್ತೇಜನ ಮತ್ತು ಹೊಸ ನೇಮಕಾತಿಗೆ ಪ್ರೋತ್ಸಾಹ ನೀಡುವ ಹೊಸ ಯೋಜನೆಗೆ ₹22,810 ಕೋಟಿ ವಿನಿಯೋಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
‘ಆತ್ಮನಿರ್ಭರ್ ಭಾರತ್ ರೋಜ್ಗಾರ್’ ಯೋಜನೆ ಅಡಿ ಸರ್ಕಾರವು, ಹೊಸದಾಗಿ ನೇಮಕಗೊಂಡ ಉದ್ಯೋಗಿಯ ನಿವೃತ್ತಿ ನಿಧಿಗೆ ಉದ್ಯೋಗಿ ಮತ್ತು ಉದ್ಯೋಗದಾತರ ಎರಡು ವರ್ಷಗಳ ಪಾಲನ್ನು ಭರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ತಿಳಿಸಿದ್ದಾರೆ.
ಈ ಯೋಜನೆಗೆ 2023ರ ವರೆಗೆ ₹22,810 ಕೋಟಿ ವಿನಿಯೋಗಿಸಲಾಗುತ್ತಿದ್ದು, 58.5 ಲಕ್ಷ ಉದ್ಯೋಗಿಗಳಿಗೆ ನೆರವಾಗಲಿದೆ ಎನ್ನಲಾಗಿದೆ.
ಇದನ್ನೂ ಓದಿ: ಜನರನ್ನು ಮುಖ್ಯವಾಹಿನಿಗೆ ಬರದಂತೆ ಮಮತಾ ಸರ್ಕಾರ ತಡೆದಿದೆ: ಜೆ.ಪಿ.ನಡ್ಡಾ ಆರೋಪ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.