ನವದೆಹಲಿ: ಕೇಂದ್ರ ರಕ್ಷಣಾ ಸಿಬ್ಬಂದಿ ಮತ್ತು ಕುಟುಂಬದ ಪಿಂಚಣಿದಾರರ ‘ಒಂದು ಶ್ರೇಣಿ, ಒಂದು ಪಿಂಚಣಿ’ (ಒಆರ್ಒಪಿ) ಯೋಜನೆಯನ್ನು ಪರಿಷ್ಕರಿಸಲು ಕೇಂದ್ರ ಸಚಿವ ಸಂಪುಟವು ಶುಕ್ರವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಯುದ್ಧದಲ್ಲಿ ಮಡಿದ ಯೋಧರ ಪತ್ನಿಯರಿಗೆ ಮತ್ತು ಅಂಗವಿಕಲ ಪಿಂಚಣಿದಾರರು ಸೇರಿದಂತೆ ಕುಟುಂಬ ಪಿಂಚಣಿದಾರರಿಗೂ ಈ ಪ್ರಯೋಜನವನ್ನು ವಿಸ್ತರಿಸಲಾಗುವುದು ಎಂದು ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.