<p class="title"><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭೆಯ ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ. ಈಗ ನಿಗದಿ ಪಡಿಸಿರುವಂತೆ ಸೆ.30ರಂದೇ ಚುನಾವಣೆ ನಡೆಯಲಿದೆ ಎಂದೂ ತಿಳಿಸಿದೆ.</p>.<p class="title">ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಆರ್.ಭಾರಧ್ವಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಕಣದಲ್ಲಿದ್ದಾರೆ.</p>.<p class="title">ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಬೇಕು ಎಂದು ಕೋರಿ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಆಯೋಗಕ್ಕೆ ಪತ್ರ ಬರೆದಿರುವ ಕ್ರಮವು ಸರಿಯಾದುದಲ್ಲ ಎಂದು ಇದೇ ವೇಳೆ ಪೀಠವು ಅಭಿಪ್ರಾಯಪಟ್ಟಿತು.</p>.<p>ಉಪಚುನಾವಣೆ ನಡೆಸಲು ಮನವಿ ಮಾಡಿ ಬರೆದಿದ್ದ ಪತ್ರದಲ್ಲಿನ ಪದಗಳ ಬಳಕೆಯನ್ನು ಉಲ್ಲೇಖಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಮುಖ್ಯ ಕಾರ್ಯದರ್ಶಿ ಅವರು ತಮ್ಮ ಪತ್ರದಲ್ಲಿ ಕ್ಷೇತ್ರಕ್ಕೆ ಉಪಚುನಾವಣೆಯು ನಡೆಯದಿದ್ದರೆ ‘ಸಾಂವಿಧಾನಿಕ ಬಿಕ್ಕಟ್ಟು’ ಉದ್ಭವಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭೆಯ ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ. ಈಗ ನಿಗದಿ ಪಡಿಸಿರುವಂತೆ ಸೆ.30ರಂದೇ ಚುನಾವಣೆ ನಡೆಯಲಿದೆ ಎಂದೂ ತಿಳಿಸಿದೆ.</p>.<p class="title">ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಆರ್.ಭಾರಧ್ವಾಜ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಕಣದಲ್ಲಿದ್ದಾರೆ.</p>.<p class="title">ಭವಾನಿಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸಬೇಕು ಎಂದು ಕೋರಿ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಆಯೋಗಕ್ಕೆ ಪತ್ರ ಬರೆದಿರುವ ಕ್ರಮವು ಸರಿಯಾದುದಲ್ಲ ಎಂದು ಇದೇ ವೇಳೆ ಪೀಠವು ಅಭಿಪ್ರಾಯಪಟ್ಟಿತು.</p>.<p>ಉಪಚುನಾವಣೆ ನಡೆಸಲು ಮನವಿ ಮಾಡಿ ಬರೆದಿದ್ದ ಪತ್ರದಲ್ಲಿನ ಪದಗಳ ಬಳಕೆಯನ್ನು ಉಲ್ಲೇಖಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಮುಖ್ಯ ಕಾರ್ಯದರ್ಶಿ ಅವರು ತಮ್ಮ ಪತ್ರದಲ್ಲಿ ಕ್ಷೇತ್ರಕ್ಕೆ ಉಪಚುನಾವಣೆಯು ನಡೆಯದಿದ್ದರೆ ‘ಸಾಂವಿಧಾನಿಕ ಬಿಕ್ಕಟ್ಟು’ ಉದ್ಭವಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>