ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ವಿಕ್ರಮ್ ನಾಥ್ ಮತ್ತು ಹಿಮಾ ಕೊಹ್ಲಿ ಅವರ ಪೀಠ, ‘ದೇಶದಲ್ಲಿ ಒಂದು ಪ್ರದೇಶಕ್ಕಿಂತ ಇನ್ನೊಂದು ಪ್ರದೇಶದ ಪರಿಸ್ಥಿತಿ ಭಿನ್ನವಾಗಿದೆ. ಲಡಾಖ್, ಉತ್ತರ ಪ್ರದೇಶದಲ್ಲಿರುವ ಪರಿಸ್ಥಿತಿ, ಕೇರಳಕ್ಕಿಂತ ಭಿನ್ನವಾಗಿದೆ. ಹಳ್ಳಿಗಳಿಗಿಂತ ನಗರ ಪ್ರದೇಶಗಳ ಪರಿಸ್ಥಿತಿ ಬೇರೆಯೇ ಇದೆ. ಇಂಥ ವಿಶಾಲ ರಾಷ್ಟ್ರದಲ್ಲಿರುವ ಪ್ರತಿ ರಾಜ್ಯದಲ್ಲೂ ವಿವಿಧ ರೀತಿಯ ಸಮಸ್ಯೆಗಳಿವೆ. ಇಂಥ ವೈವಿಧ್ಯಮಯ ಸನ್ನಿವೇಶಗಳಿರುವ ದೇಶಕ್ಕೆ ಒಂದೇ ಆದೇಶ ನೀಡಲು ಸಾಧ್ಯವಿಲ್ಲ‘ ಎಂದು ನ್ಯಾಯಪೀಠ ಹೇಳಿದೆ.