<p><strong>ನವದೆಹಲಿ:</strong> ದೇಶದಲ್ಲಿ ಜಾರಿಯಲ್ಲಿರುವ ಲಸಿಕಾ ಅಭಿಯಾನವನ್ನು ಅನುಮಾನಿಸಿ ತಪ್ಪು ಸಂದೇಶ ರವಾನಿಸಲು ಸಾಧ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ಒ) ಕೂಡಾ ಲಸಿಕೆ ಪರವಾಗಿ ಮಾತನಾಡಿದೆ. ಬೇರೆ ದೇಶಗಳೂ ಕೂಡಾ ಲಸಿಕೆ ನೀಡುತ್ತಿವೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.</p>.<p>ಲಸಿಕೆ ಪಡೆದ ಆರೋಗ್ಯವಂತ ಜನರು ಮೃತಪಡುತ್ತಿರುವ ಕುರಿತು ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸುವುದಾಗಿ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎ.ಎಸ್. ಬೋಪಣ್ಣ ಅವರಿದ್ದ ಪೀಠ ಹೇಳಿದೆ.</p>.<p>ಲಸಿಕೆಯ ಗಂಭೀರ ಮತ್ತು ಅಲ್ಪ ಪ್ರಮಾಣದ ಪ್ರತಿಕೂಲ ಪರಿಣಾಮ ಕುರಿತು ನಿಗಾವಹಿಸುವಂತೆ ಪರಿಷ್ಕೃತ ‘ರೋಗ ನಿರೋಧಕದ ಪ್ರತಿಕೂಲ ಪರಿಣಾಮ’(ಎಇಎಫ್ಐ) ಮಾರ್ಗಸೂಚಿಯಲ್ಲಿ ಹೇಳಲಾಗಿದೆ ಎಂದು ಪೀಠ ಹೇಳಿದೆ.</p>.<p>ಲಸಿಕೆಗೆ ಸಂಬಂಧಿಸಿದಂತೆ ದೇಶದಲ್ಲಿ ನೂರಾರು ಸಾವುಗಳು ವರದಿಯಾಗಿವೆ ಎಂದು ಅಜಯ್ ಕುಮಾರ್ ಗುಪ್ತ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಲಸಿಕೆ ಪಡೆದ 30 ದಿನಗಳ ಒಳಗೆ ಸಂಭವಿಸುತ್ತಿರುವ ಸಾವುಗಳ ಕುರಿತು ಮಾಹಿತಿ ಕಲೆಹಾಕುವಂತೆ ಮತ್ತು ಈ ಕುರಿತು ಮಾಹಿತಿ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಹೇಳಿದ್ದರು.</p>.<p>ಲಸಿಕೆಗೆ ಸಂಬಂಧಿಸಿದಂತೆದೇಶದಾದ್ಯಂತ ನೂರಾರು ಜನರು ಮೃತಪಟ್ಟಿರುವ ಕುರಿತ ವರದಿಯನ್ನು ಅರ್ಜಿದಾರರ ಪರವಾಗಿ ಕೋರ್ಟ್ಗೆ ಹಾಜರಾಗಿದ್ದ ಹಿರಿಯ ವಕೀಲ ಕೋಲಿನ್ ಗ್ಯಾನ್ಸಾಲ್ವೆಸ್ ಕೋರ್ಟ್ಗೆ ಸಲ್ಲಿಸಿದರು.</p>.<p>ಅರ್ಜಿ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ಕೋರ್ಟ್ ಎರಡು ವಾರಗಳ ನಂತರ ನಿಗದಿಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಜಾರಿಯಲ್ಲಿರುವ ಲಸಿಕಾ ಅಭಿಯಾನವನ್ನು ಅನುಮಾನಿಸಿ ತಪ್ಪು ಸಂದೇಶ ರವಾನಿಸಲು ಸಾಧ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ಒ) ಕೂಡಾ ಲಸಿಕೆ ಪರವಾಗಿ ಮಾತನಾಡಿದೆ. ಬೇರೆ ದೇಶಗಳೂ ಕೂಡಾ ಲಸಿಕೆ ನೀಡುತ್ತಿವೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.</p>.<p>ಲಸಿಕೆ ಪಡೆದ ಆರೋಗ್ಯವಂತ ಜನರು ಮೃತಪಡುತ್ತಿರುವ ಕುರಿತು ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸುವುದಾಗಿ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎ.ಎಸ್. ಬೋಪಣ್ಣ ಅವರಿದ್ದ ಪೀಠ ಹೇಳಿದೆ.</p>.<p>ಲಸಿಕೆಯ ಗಂಭೀರ ಮತ್ತು ಅಲ್ಪ ಪ್ರಮಾಣದ ಪ್ರತಿಕೂಲ ಪರಿಣಾಮ ಕುರಿತು ನಿಗಾವಹಿಸುವಂತೆ ಪರಿಷ್ಕೃತ ‘ರೋಗ ನಿರೋಧಕದ ಪ್ರತಿಕೂಲ ಪರಿಣಾಮ’(ಎಇಎಫ್ಐ) ಮಾರ್ಗಸೂಚಿಯಲ್ಲಿ ಹೇಳಲಾಗಿದೆ ಎಂದು ಪೀಠ ಹೇಳಿದೆ.</p>.<p>ಲಸಿಕೆಗೆ ಸಂಬಂಧಿಸಿದಂತೆ ದೇಶದಲ್ಲಿ ನೂರಾರು ಸಾವುಗಳು ವರದಿಯಾಗಿವೆ ಎಂದು ಅಜಯ್ ಕುಮಾರ್ ಗುಪ್ತ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಲಸಿಕೆ ಪಡೆದ 30 ದಿನಗಳ ಒಳಗೆ ಸಂಭವಿಸುತ್ತಿರುವ ಸಾವುಗಳ ಕುರಿತು ಮಾಹಿತಿ ಕಲೆಹಾಕುವಂತೆ ಮತ್ತು ಈ ಕುರಿತು ಮಾಹಿತಿ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಅವರು ಅರ್ಜಿಯಲ್ಲಿ ಹೇಳಿದ್ದರು.</p>.<p>ಲಸಿಕೆಗೆ ಸಂಬಂಧಿಸಿದಂತೆದೇಶದಾದ್ಯಂತ ನೂರಾರು ಜನರು ಮೃತಪಟ್ಟಿರುವ ಕುರಿತ ವರದಿಯನ್ನು ಅರ್ಜಿದಾರರ ಪರವಾಗಿ ಕೋರ್ಟ್ಗೆ ಹಾಜರಾಗಿದ್ದ ಹಿರಿಯ ವಕೀಲ ಕೋಲಿನ್ ಗ್ಯಾನ್ಸಾಲ್ವೆಸ್ ಕೋರ್ಟ್ಗೆ ಸಲ್ಲಿಸಿದರು.</p>.<p>ಅರ್ಜಿ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ಕೋರ್ಟ್ ಎರಡು ವಾರಗಳ ನಂತರ ನಿಗದಿಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>