ನಾಲ್ಕು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದ ಮುರ್ಮು ಅವರು ಮಮತಾ ಬ್ಯಾನರ್ಜಿ ಅವರಿಗೆ ಬರೆದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ಒಂದು ಮೀನು ನೀರಿನಿಂದ ಹೊರಗುಳಿಯಲು ಸಾಧ್ಯವಿಲ್ಲ. ಹೀಗೆ ನಾನು ನೀವಿಲ್ಲದೆ ಬದುಕಲು ಸಾಧ್ಯವಿಲ್ಲ ದಿದಿ. ನಾನು ಕ್ಷಮೆ ಕೋರುತ್ತೇನೆ ಮತ್ತು ನೀವು ನನ್ನನ್ನು ಕ್ಷಮಿಸದಿದ್ದರೆ, ನನಗೆ ಬದುಕಲು ಸಾಧ್ಯವಾಗುವುದಿಲ್ಲ. ದಯವಿಟ್ಟು ನನಗೆ ಹಿಂತಿರುಗಿ ಬರಲು ಅವಕಾಶ ಮಾಡಿಕೊಡಿ. ನನ್ನ ಉಳಿದ ಜೀವನವನ್ನು ನಿಮ್ಮೊಂದಿಗೆ ಕಳೆಯಲು ಅವಕಾಶ ನೀಡಿ’ ಎಂದು ಪತ್ರದಲ್ಲಿ ಕೋರಿದ್ದಾರೆ.