<p><strong>ನವದೆಹಲಿ</strong>: ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿಗೆ ಮಂಗಳವಾರ ಪತ್ರವನ್ನು ಕಳುಹಿಸಿದ್ದಾರೆ. ಆ ನಂತರ ಅಧಿಕೃತವಾಗಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.</p>.<p>'ನನ್ನನ್ನು ಮತ್ತು ನನ್ನ ಆಡಳಿತವನ್ನು ನಿಂದಿಸಿದ್ದಾರೆ ಎಂಬುದು ಸಿಧು ಅವರ ಏಕೈಕ ಖ್ಯಾತಿಯಾಗಿದೆ. ಸಿಧು ಅವರನ್ನು ರಾಹುಲ್ ಮತ್ತು ಪ್ರಿಯಾಂಕಾ ಬೆಂಬಲಿಸಿದರು. ಆದರೆ, ನೀವು ಹರೀಶ್ ರಾವತ್ ಅವರ ಮಾತುಗಳಿಗೆ ತಲೆದೂಗಿದ್ದೀರಿ. ಈ ವ್ಯಕ್ತಿಯ(ಸಿಧು) ದುಷ್ಕೃತ್ಯಗಳನ್ನು ನೋಡದೇ ಕಣ್ಣು ಮುಚ್ಚಿ ಕುಳಿತಿದ್ದೀರಿ' ಎಂದು ಸೋನಿಯಾಗೆ ಬರೆದ ಪತ್ರದಲ್ಲಿ ಕ್ಯಾಪ್ಟನ್ ತಿಳಿಸಿದ್ದಾರೆ.</p>.<p>ಕಾಂಗ್ರೆಸ್ ತೊರೆದಿದ್ದ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಹೊಸ ಪಕ್ಷದ ಹೆಸರನ್ನು ಮಂಗಳವಾರ ಘೋಷಿಸಿದ್ದಾರೆ.</p>.<p>ಪಂಜಾಬ್ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಧು ಅವರೊಂದಿಗಿನ ತೀವ್ರ ಸಂಘರ್ಷದ ನಡುವೆ ಅಮರಿಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿಗೆ ಮಂಗಳವಾರ ಪತ್ರವನ್ನು ಕಳುಹಿಸಿದ್ದಾರೆ. ಆ ನಂತರ ಅಧಿಕೃತವಾಗಿ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.</p>.<p>'ನನ್ನನ್ನು ಮತ್ತು ನನ್ನ ಆಡಳಿತವನ್ನು ನಿಂದಿಸಿದ್ದಾರೆ ಎಂಬುದು ಸಿಧು ಅವರ ಏಕೈಕ ಖ್ಯಾತಿಯಾಗಿದೆ. ಸಿಧು ಅವರನ್ನು ರಾಹುಲ್ ಮತ್ತು ಪ್ರಿಯಾಂಕಾ ಬೆಂಬಲಿಸಿದರು. ಆದರೆ, ನೀವು ಹರೀಶ್ ರಾವತ್ ಅವರ ಮಾತುಗಳಿಗೆ ತಲೆದೂಗಿದ್ದೀರಿ. ಈ ವ್ಯಕ್ತಿಯ(ಸಿಧು) ದುಷ್ಕೃತ್ಯಗಳನ್ನು ನೋಡದೇ ಕಣ್ಣು ಮುಚ್ಚಿ ಕುಳಿತಿದ್ದೀರಿ' ಎಂದು ಸೋನಿಯಾಗೆ ಬರೆದ ಪತ್ರದಲ್ಲಿ ಕ್ಯಾಪ್ಟನ್ ತಿಳಿಸಿದ್ದಾರೆ.</p>.<p>ಕಾಂಗ್ರೆಸ್ ತೊರೆದಿದ್ದ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಹೊಸ ಪಕ್ಷದ ಹೆಸರನ್ನು ಮಂಗಳವಾರ ಘೋಷಿಸಿದ್ದಾರೆ.</p>.<p>ಪಂಜಾಬ್ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಧು ಅವರೊಂದಿಗಿನ ತೀವ್ರ ಸಂಘರ್ಷದ ನಡುವೆ ಅಮರಿಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>