<p><strong>ಮುಂಬೈ:</strong> ಎನ್ಐಎ ತನಿಖೆ ನಡೆಸುತ್ತಿರುವ ‘ಸ್ಕಾರ್ಪಿಯೊ ವಾಹನದಲ್ಲಿ ಸ್ಪೋಟಕಗಳು ತುಂಬಿದ್ದ ಪ್ರಕರಣದಲ್ಲಿ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಸಿದ ಐಷಾರಾಮಿ ಕಾರುಗಳಲ್ಲಿ ಒಂದನ್ನು ಶಿವಸೇನಾ ಶಾಸಕರೊಬ್ಬರ ಕಚೇರಿಯ ಹೊರಗೆ ನಿಲ್ಲಿಸಲಾಗಿತ್ತು ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಗುರುವಾರ ಆರೋಪಿಸಿದ್ದಾರೆ.</p>.<p>ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ಎನ್ಐಎ, ಎರಡು ಮರ್ಸಿಡಿಸ್ ಕಾರುಗಳು ಸೇರಿದಂತೆ ಒಟ್ಟು ಐದು ವಾಹನಗಳನ್ನು ವಶಪಡಿಸಿಕೊಂಡಿದೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ರಾಣೆ, ವಾಜೆ ಅವರನ್ನು ಎನ್ಐಎ ಬಂಧಿಸಿದ ದಿನ, ಅವರು ಬಳಸಿದ ಮರ್ಸಿಡಿಸ್ ಕಾರುಗಳಲ್ಲಿ ಒಂದನ್ನು ಶಿವಸೇನಾದ ಶಾಸಕರ ಕಚೇರಿಯ ಹೊರಗೆ ನಿಲ್ಲಿಸಲಾಗಿತ್ತು ಎಂದು ಆರೋಪಿಸಿದ್ದಾರೆ.</p>.<p>'ಸಂಜಯ್ ರಾವುತ್ ಅವರು ರಾಜಕೀಯದಲ್ಲಿ ಪ್ರತಿಯೊಬ್ಬರೂ ಏನನ್ನಾದರೂ ಮರೆಮಾಚಲು ಹೊಂದಿರುತ್ತಾರೆ ಎಂದು ಹೇಳಿದ್ದಾರೆ. ಹಾಗಿದ್ದರೆ ಅವರು ಕೂಡ ಏನನ್ನಾದರೂ ಮರೆಮಾಚಲು ಏನನ್ನಾದರು ಹೊಂದಿರಬಹುದೆಂದು ನಾನು ಅವರಿಗೆ ಹೇಳಲು ಬಯಸುತ್ತೇನೆ, ಆದರೆ ಅದು ನಮ್ಮ ವಿಚಾರವಲ್ಲ. ಈ ಪ್ರಕರಣದಲ್ಲಿ ಸತ್ಯ ಹೊರಬರಬೇಕು ಎಂದು ನಾವು ಬಯಸುತ್ತೇವೆ,' ಎಂದು ರಾಣೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಎನ್ಐಎ ತನಿಖೆ ನಡೆಸುತ್ತಿರುವ ‘ಸ್ಕಾರ್ಪಿಯೊ ವಾಹನದಲ್ಲಿ ಸ್ಪೋಟಕಗಳು ತುಂಬಿದ್ದ ಪ್ರಕರಣದಲ್ಲಿ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಸಿದ ಐಷಾರಾಮಿ ಕಾರುಗಳಲ್ಲಿ ಒಂದನ್ನು ಶಿವಸೇನಾ ಶಾಸಕರೊಬ್ಬರ ಕಚೇರಿಯ ಹೊರಗೆ ನಿಲ್ಲಿಸಲಾಗಿತ್ತು ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಗುರುವಾರ ಆರೋಪಿಸಿದ್ದಾರೆ.</p>.<p>ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ಎನ್ಐಎ, ಎರಡು ಮರ್ಸಿಡಿಸ್ ಕಾರುಗಳು ಸೇರಿದಂತೆ ಒಟ್ಟು ಐದು ವಾಹನಗಳನ್ನು ವಶಪಡಿಸಿಕೊಂಡಿದೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ರಾಣೆ, ವಾಜೆ ಅವರನ್ನು ಎನ್ಐಎ ಬಂಧಿಸಿದ ದಿನ, ಅವರು ಬಳಸಿದ ಮರ್ಸಿಡಿಸ್ ಕಾರುಗಳಲ್ಲಿ ಒಂದನ್ನು ಶಿವಸೇನಾದ ಶಾಸಕರ ಕಚೇರಿಯ ಹೊರಗೆ ನಿಲ್ಲಿಸಲಾಗಿತ್ತು ಎಂದು ಆರೋಪಿಸಿದ್ದಾರೆ.</p>.<p>'ಸಂಜಯ್ ರಾವುತ್ ಅವರು ರಾಜಕೀಯದಲ್ಲಿ ಪ್ರತಿಯೊಬ್ಬರೂ ಏನನ್ನಾದರೂ ಮರೆಮಾಚಲು ಹೊಂದಿರುತ್ತಾರೆ ಎಂದು ಹೇಳಿದ್ದಾರೆ. ಹಾಗಿದ್ದರೆ ಅವರು ಕೂಡ ಏನನ್ನಾದರೂ ಮರೆಮಾಚಲು ಏನನ್ನಾದರು ಹೊಂದಿರಬಹುದೆಂದು ನಾನು ಅವರಿಗೆ ಹೇಳಲು ಬಯಸುತ್ತೇನೆ, ಆದರೆ ಅದು ನಮ್ಮ ವಿಚಾರವಲ್ಲ. ಈ ಪ್ರಕರಣದಲ್ಲಿ ಸತ್ಯ ಹೊರಬರಬೇಕು ಎಂದು ನಾವು ಬಯಸುತ್ತೇವೆ,' ಎಂದು ರಾಣೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>