ಇವರು ಪ್ರತಿಭಟನೆಯನ್ನು ಬೆಂಬಲಿಸಿದ್ದರು. ಆರೋಪಿಗಳ ವಿರುದ್ಧ ಕ್ರಿಮಿನಲ್ ಸಂಚು, ಕಾನೂನುಬಾಹಿರವಾಗಿ ಗುಂಪುಸೇರುವಿಕೆ ಮತ್ತು ಗಲಭೆ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರಲ್ಲದೇ ಇತರ ಸುಮಾರು 110 ಮಂದಿ ಪ್ರತಿಭಟನಾಕಾರರ ವಿರುದ್ಧವೂ ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಈ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.ಕೇರಳ ಹೈಕೋರ್ಟ್ ಆದೇಶದ ನಡುವೆಯೂ ನಿರ್ಮಾಣ ಹಂತದಲ್ಲಿರುವವಿಳಿಂಞಬಂದರಿನ ಬಳಿ ಶನಿವಾರ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಜನರು ನಿರ್ಮಾಣ ಕಾಮಗಾರಿಗೆ ಬಳಸುವ ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ಗಳನ್ನು ತಡೆದು ಗಲಭೆ ನಡೆಸಿದ್ದರು.