ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜದ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಇರಿಸಿದ್ದಕ್ಕಾಗಿ ಉತ್ತರ ಪ್ರದೇಶ ಕಾಂಗ್ರೆಸ್ ಕೂಡ ಟೀಕಿಸಿದೆ. ಯುಪಿ ಕಾಂಗ್ರೆಸ್ ವಕ್ತಾರ ಅಮರನಾಥ ಅಗರ್ವಾಲ್ ಮಾತನಾಡಿ, 'ಬಿಜೆಪಿ ನಾಯಕರು ಯಾವಾಗಲೂ ರಾಷ್ಟ್ರಕ್ಕಿಂತ ಮೇಲಿರುವುದರಂತೆ ವರ್ತಿಸುತ್ತಾರೆ. ಈ ಘಟನೆಯು ಅವರ ಮನಸ್ಥಿತಿಯನ್ನು ತೋರಿಸುತ್ತದೆ' ಎಂದು ಹೇಳಿದ್ದಾರೆ.