ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ತೀರ್ಪಿನ ಪ್ರಕಾರ, ಕರ್ನಾಟಕವು ಸಾಮಾನ್ಯ ವರ್ಷದಲ್ಲಿ ಜೂನ್ನಿಂದ ಆಗಸ್ಟ್ ಅಂತ್ಯದವರೆಗೆ 86.83 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ ಹರಿಸಬೇಕು. ಆದರೆ, ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯದ ಪ್ರದೇಶದ ಜಲಾಶಯಗಳು ಭರ್ತಿ ಆಗದೇ ಇರುವುದರಿಂದ, ಕರ್ನಾಟಕವು ಕರ್ನಾಟಕವು ಆಗಸ್ಟ್ 30ರವರೆಗೆ, 57.04ಟಿಎಂಸಿ ಅಡಿ ನೀರನ್ನು ಮಾತ್ರ ಹರಿಸಿದೆ. ಸೆಪ್ಟೆಂಬರ್ನಲ್ಲಿ ಉತ್ತಮ ಮಳೆಯಾದರೆ, ಬಾಕಿ ನೀರನ್ನು ತಮಿಳುನಾಡಿಗೆ ಹರಿಸುವುದಾಗಿ ಕರ್ನಾಟಕವು ಪ್ರಾಧಿಕಾರಕ್ಕೆ ತಿಳಿಸಿದೆ.