<p class="bodytext"><strong>ಕೋಲ್ಕತ್ತ</strong>: ನಾರದಾ ಮಾರುವೇಷ ಕಾರ್ಯಾಚರಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ನ ಮೂವರು ಹಿರಿಯ ನಾಯಕರು ಮತ್ತು ಸಚಿವರನ್ನು ಸಿಬಿಐ ಸೋಮವಾರ ಬೆಳಿಗ್ಗೆ ಬಂಧಿಸಿದೆ.</p>.<p class="bodytext">ಸಾರಿಗೆ ಸಚಿವ ಫಿರ್ಹಾದ್ ಹಕೀಮ್, ಪಂಚಾಯತ್ ಸಚಿವ ಸುಬ್ರತಾ ಮುಖರ್ಜಿ, ಶಾಸಕ ಮದನ್ ಮಿತ್ರಾ ಮತ್ತು ಟಿಎಂಸಿಯ ಮಾಜಿ ಮುಖಂಡ ಸೋವನ್ ಚಟರ್ಜಿ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ‘ಪ್ರಜಾವಾಣಿ‘ಗೆ ಹೇಳಿವೆ.</p>.<p class="bodytext">ಸೋಮವಾರ ಬೆಳಿಗ್ಗೆ ಹಕೀಮ್, ಮುಖರ್ಜಿ, ಮಿತ್ರಾ ಮತ್ತು ಚಟರ್ಜಿ ಅವರನ್ನು ಅವರವರ ನಿವಾಸದಿಂದ ಸಿಬಿಐ ವಶಕ್ಕೆ ಪಡೆದುಕೊಂಡಿತು. ನಂತರ ನಿಜಾಂ ಪ್ಯಾಲೇಜನಲ್ಲಿರುವ ಸಿಬಿಐ ಕಚೇರಿಗೆ ಕರೆತರಲಾಯಿತು. ಈ ವೇಳೆ ಹಕೀಮ್ ಅವರು, ನಾರದಾ ಮಾರುವೇಷ ಕಾರ್ಯಾಚರಣೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸಲಾಗಿದೆ ಎಂದು ಹಕೀಮ್ ಹೇಳಿದರು.</p>.<p class="bodytext">ನಾಟಕೀಯ ಬೆಳವಣಿಗೆಯಲ್ಲಿ ಕೇಂದ್ರೀಯ ಪಡೆಗಳ ಸಿಬ್ಬಂದಿ ಹಕೀಮ್ ಅವರನಿವಾಸವನ್ನು ಸುತ್ತುವರೆದರು. ‘ಯಾವುದೇ ಸೂಚನೆ ನೀಡದೆ ತಮ್ಮನ್ನು ಬಂಧಿಸಲಾಗುತ್ತಿದೆ’ ಎಂದು ಹಕೀಮ್ ಆರೋಪಿಸಿದರು.</p>.<p class="bodytext">ಈ ಸಂದರ್ಭದಲ್ಲಿ ಹಕೀಮ್ ಅವರ ನಿವಾಸದ ಮುಂದೆ ಟಿಎಂಸಿಯ ಅನೇಕ ಕಾರ್ಯಕರ್ತರು ಸೇರಿದ್ದು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಉದ್ರಿಕ್ತ ವಾತಾವರಣ ಇತ್ತು.</p>.<p class="bodytext">ನಾಲ್ವರ ವಿರುದ್ಧ ಸದ್ಯವೇ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ ಸಿಬಿಐ ಮೂಲಗಳು ಹೇಳಿವೆ.</p>.<p class="bodytext">ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರಾ ಮತ್ತು ಸೋವನ್ ಚಟರ್ಜಿ ಅವರ ವಿರುದ್ಧ ತನಿಖೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಸಮ್ಮತಿ ನೀಡಿದ ಕೆಲ ದಿನಗಳ ನಂತರ ಈ ಬೆಳವಣಿಗೆಗಳು ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಕೋಲ್ಕತ್ತ</strong>: ನಾರದಾ ಮಾರುವೇಷ ಕಾರ್ಯಾಚರಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ನ ಮೂವರು ಹಿರಿಯ ನಾಯಕರು ಮತ್ತು ಸಚಿವರನ್ನು ಸಿಬಿಐ ಸೋಮವಾರ ಬೆಳಿಗ್ಗೆ ಬಂಧಿಸಿದೆ.</p>.<p class="bodytext">ಸಾರಿಗೆ ಸಚಿವ ಫಿರ್ಹಾದ್ ಹಕೀಮ್, ಪಂಚಾಯತ್ ಸಚಿವ ಸುಬ್ರತಾ ಮುಖರ್ಜಿ, ಶಾಸಕ ಮದನ್ ಮಿತ್ರಾ ಮತ್ತು ಟಿಎಂಸಿಯ ಮಾಜಿ ಮುಖಂಡ ಸೋವನ್ ಚಟರ್ಜಿ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಮೂಲಗಳು ‘ಪ್ರಜಾವಾಣಿ‘ಗೆ ಹೇಳಿವೆ.</p>.<p class="bodytext">ಸೋಮವಾರ ಬೆಳಿಗ್ಗೆ ಹಕೀಮ್, ಮುಖರ್ಜಿ, ಮಿತ್ರಾ ಮತ್ತು ಚಟರ್ಜಿ ಅವರನ್ನು ಅವರವರ ನಿವಾಸದಿಂದ ಸಿಬಿಐ ವಶಕ್ಕೆ ಪಡೆದುಕೊಂಡಿತು. ನಂತರ ನಿಜಾಂ ಪ್ಯಾಲೇಜನಲ್ಲಿರುವ ಸಿಬಿಐ ಕಚೇರಿಗೆ ಕರೆತರಲಾಯಿತು. ಈ ವೇಳೆ ಹಕೀಮ್ ಅವರು, ನಾರದಾ ಮಾರುವೇಷ ಕಾರ್ಯಾಚರಣೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸಲಾಗಿದೆ ಎಂದು ಹಕೀಮ್ ಹೇಳಿದರು.</p>.<p class="bodytext">ನಾಟಕೀಯ ಬೆಳವಣಿಗೆಯಲ್ಲಿ ಕೇಂದ್ರೀಯ ಪಡೆಗಳ ಸಿಬ್ಬಂದಿ ಹಕೀಮ್ ಅವರನಿವಾಸವನ್ನು ಸುತ್ತುವರೆದರು. ‘ಯಾವುದೇ ಸೂಚನೆ ನೀಡದೆ ತಮ್ಮನ್ನು ಬಂಧಿಸಲಾಗುತ್ತಿದೆ’ ಎಂದು ಹಕೀಮ್ ಆರೋಪಿಸಿದರು.</p>.<p class="bodytext">ಈ ಸಂದರ್ಭದಲ್ಲಿ ಹಕೀಮ್ ಅವರ ನಿವಾಸದ ಮುಂದೆ ಟಿಎಂಸಿಯ ಅನೇಕ ಕಾರ್ಯಕರ್ತರು ಸೇರಿದ್ದು ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಉದ್ರಿಕ್ತ ವಾತಾವರಣ ಇತ್ತು.</p>.<p class="bodytext">ನಾಲ್ವರ ವಿರುದ್ಧ ಸದ್ಯವೇ ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ ಸಿಬಿಐ ಮೂಲಗಳು ಹೇಳಿವೆ.</p>.<p class="bodytext">ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರಾ ಮತ್ತು ಸೋವನ್ ಚಟರ್ಜಿ ಅವರ ವಿರುದ್ಧ ತನಿಖೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಸಮ್ಮತಿ ನೀಡಿದ ಕೆಲ ದಿನಗಳ ನಂತರ ಈ ಬೆಳವಣಿಗೆಗಳು ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>