ಬಸ್ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ದೆಹಲಿಯ ಬಿಜೆಪಿ ಘಟಕವು ಕಳೆದ ವರ್ಷ ಸಲ್ಲಿಸಿದ್ದ ದೂರು ಆಧರಿಸಿ, ಹಿಂದಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ತನಿಖೆಗೆ ಆದೇಶಿಸಿದ್ದರು. ₹890 ಕೋಟಿ ಮೌಲ್ಯದ ಸಾವಿರ ಬಸ್ ಖರೀದಿ ಹಾಗೂ ಬಸ್ಗಳ ನಿರ್ವಹಣೆಗೆ ₹350 ಕೋಟಿ ವೆಚ್ಚ ಮಾಡುವ ದೆಹಲಿ ಸರ್ಕಾರದ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಎರಡೂ ಗುತ್ತಿಗೆಯನ್ನು ಒಂದೇ ಕಂಪನಿಗೆ ನೀಡಲಾಗಿದ್ದು, 12 ವರ್ಷಗಳ ನಿರ್ವಹಣೆಗೆ ₹3,412 ಕೋಟಿ ವೆಚ್ಚವಾಗಲಿದೆ ಎಂದು ಬಿಜೆಪಿ ಹೇಳಿತ್ತು. ಹೀಗಾಗಿ ದೆಹಲಿ ಸರ್ಕಾರವು ಬಸ್ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿತ್ತು.