ಅಕ್ರಮ ಆಸ್ತಿ ಹೊಂದಿರುವುದು, ಕೆಲವು ವ್ಯಕ್ತಿಗಳು ಮತ್ತು ಕಂಪನಿಗಳ ಜತೆ ಸಂಶಯಾಸ್ಪದ ರೀತಿಯಲ್ಲಿ ಹಣದ ವಹಿವಾಟು ನಡೆಸಿರುವುದು, ಆದಾಯ ತೆರಿಗೆ ದಾಳಿ ವೇಳೆ ಪತ್ತೆಯಾದ ನಗದು ಮೂಲ ತಿಳಿಸದೇ ಇರುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಿಬಿಐ ಅಧಿಕಾರಿಗಳು ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.