ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಸತ್ಯೇಂದ್ರ ಜೈನ್ ವಿಚಾರಣೆ ನಡೆಸಿದ ಸಿಬಿಐ

ದೆಹಲಿ ಅಬಕಾರಿ ನೀತಿ ಹಗರಣ
Last Updated 15 ಫೆಬ್ರುವರಿ 2023, 15:34 IST
ಅಕ್ಷರ ಗಾತ್ರ

ನವದೆಹಲಿ: ತಿಹಾರ್ ಜೈಲಿನಲ್ಲಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್‌ ಅವರನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ನಡೆಸಿತು ಎಂದು ಜೈನ್‌ ಪರ ವಕೀಲರು ಬುಧವಾರ ತಿಳಿಸಿದರು.

ವಿಚಾರಣೆಗೆ ಅನುಮತಿ ಕೋರಿ ಸಿಬಿಐ ಕಳೆದ ಶುಕ್ರವಾರ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್‌ ಅವರಲ್ಲಿ ಮನವಿ ಸಲ್ಲಿಸಿದ್ದು, ಅವರು ಒಪ್ಪಿಗೆ ನೀಡಿದ್ದರು.

ಇದೇ ವೇಳೆ, ಬಂಧನದಲ್ಲಿರುವ ಎಎಪಿ ಸಂವಹನ ಉಸ್ತುವಾರಿ ವಿಜಯ್‌ ನಾಯರ್‌ ಅವರನ್ನೂ ಸಿಬಿಐ ವಿಚಾರಣೆ ನಡೆಸಿತು ಎಂದು ತಿಳಿಸಿದರು.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಜೈನ್‌ ಅವರು ತಿಹಾರ್‌ ಜೈಲಿನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT